11:59 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಪ್ರಧಾನಿ ನಾಳೆ ಮಂಗಳೂರಿಗೆ: 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

01/09/2022, 20:11

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ  ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು