12:28 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

25/06/2021, 17:03

ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ – ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜುಲೈ 1ರ ವರೆಗೆ ಖಾಸಗಿ ಸಿಟಿ ಬಸ್ ಗಳ ಓಡಾಟವಿಲ್ಲದ ಕಾರಣ
ಪ್ರಯಾಣಿಕರು ಸರಕಾರದ ನರ್ಮ್ ಬಸ್ ಗಳನ್ನೇ ಆಶ್ರಯಿಸಬೇಕಾಗಿದೆ. ಇದು ಪ್ರಯಾಣಿಕರ ತಪ್ಪಲ್ಲ, ಸ್ವಂತ ವಾಹನ ಇಲ್ಲದವರು ಯಾವುದೇ ರಿಸ್ಕ್ ತೆಗೆದುಕೊಂಡಾದರೂ ಗಮ್ಯ ಸ್ಥಾನ ಸೇರಲೇ ಬೇಕು. ಜಿಲ್ಲಾಡಳಿತ ಇದಕ್ಕೆ ತಕ್ಕ ವ್ಯವಸ್ಥೆ ಮಾಡಲು ವಿಫಲವಾಗಿರುವುದರಿಂದ ಕೊರೊನಾ ಗೈಡ್ ಲೈನ್ಸ್ ಉಲ್ಲಂಘಿಸಿ ನಾಗರಿಕರು ಪ್ರಯಾಣ ಮಾಡುವ ಪ್ರಮೇಯ ಒದಗಿ ಬಂದಿದೆ.

ತೊಕ್ಕೊಟ್ಟು, ತಲಪಾಡಿ, ಸುರತ್ಕಲ್, ಬೊಂದೇಲ್, ಕಾವೂರು ಮುಂತಾದ ಕಡೆ ಮಾಮೂಲಿಯಾಗಿ ಪ್ರಯಾಣಿಕರ ಸಂಖ್ಯೆಯೂ ಜಾಸ್ತಿ ಇರುತ್ತದೆ. ಹಾಗಾಗಿ ಪ್ರಯಾಣಿಕರ ಸಾಂದ್ರತೆ ಜಾಸ್ತಿ ಇರುವ ರೂಟ್ ಗಳಿಗೆ ನಾಲ್ಕು ಬಸ್ ಜಾಸ್ತಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರ ಅಭಿಪ್ರಾಯ. ಇಲ್ಲದಿದ್ದರೆ ಕೊರೊನಾ 3ನೇ ಅಲೆಗೆ ನಾವೇ ಸಿದ್ಧತೆ ಮಾಡಿದಾಗೆ ಆಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು