12:25 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

25/06/2021, 17:03

ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ – ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜುಲೈ 1ರ ವರೆಗೆ ಖಾಸಗಿ ಸಿಟಿ ಬಸ್ ಗಳ ಓಡಾಟವಿಲ್ಲದ ಕಾರಣ
ಪ್ರಯಾಣಿಕರು ಸರಕಾರದ ನರ್ಮ್ ಬಸ್ ಗಳನ್ನೇ ಆಶ್ರಯಿಸಬೇಕಾಗಿದೆ. ಇದು ಪ್ರಯಾಣಿಕರ ತಪ್ಪಲ್ಲ, ಸ್ವಂತ ವಾಹನ ಇಲ್ಲದವರು ಯಾವುದೇ ರಿಸ್ಕ್ ತೆಗೆದುಕೊಂಡಾದರೂ ಗಮ್ಯ ಸ್ಥಾನ ಸೇರಲೇ ಬೇಕು. ಜಿಲ್ಲಾಡಳಿತ ಇದಕ್ಕೆ ತಕ್ಕ ವ್ಯವಸ್ಥೆ ಮಾಡಲು ವಿಫಲವಾಗಿರುವುದರಿಂದ ಕೊರೊನಾ ಗೈಡ್ ಲೈನ್ಸ್ ಉಲ್ಲಂಘಿಸಿ ನಾಗರಿಕರು ಪ್ರಯಾಣ ಮಾಡುವ ಪ್ರಮೇಯ ಒದಗಿ ಬಂದಿದೆ.

ತೊಕ್ಕೊಟ್ಟು, ತಲಪಾಡಿ, ಸುರತ್ಕಲ್, ಬೊಂದೇಲ್, ಕಾವೂರು ಮುಂತಾದ ಕಡೆ ಮಾಮೂಲಿಯಾಗಿ ಪ್ರಯಾಣಿಕರ ಸಂಖ್ಯೆಯೂ ಜಾಸ್ತಿ ಇರುತ್ತದೆ. ಹಾಗಾಗಿ ಪ್ರಯಾಣಿಕರ ಸಾಂದ್ರತೆ ಜಾಸ್ತಿ ಇರುವ ರೂಟ್ ಗಳಿಗೆ ನಾಲ್ಕು ಬಸ್ ಜಾಸ್ತಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರ ಅಭಿಪ್ರಾಯ. ಇಲ್ಲದಿದ್ದರೆ ಕೊರೊನಾ 3ನೇ ಅಲೆಗೆ ನಾವೇ ಸಿದ್ಧತೆ ಮಾಡಿದಾಗೆ ಆಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು