10:34 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರಧಾನಿ ಕ್ರಮ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

02/09/2022, 11:01

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು 3800 ಕೋಟಿ ರೂ
ಗಳ ಯೋಜನೆಗೆ ಇಂದು ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿದರು.
ರಾಜ್ಯದಲ್ಲಿ ಆಳ ಸಮುದ್ರ ಮೀನುಗಾರಿಕೆಗೆ 100 ಬೋಟ್ ಗಳನ್ನು ಕೇಂದ್ರ ಸರಕಾರ ಒದಗಿಸಿದೆ. ಮತ್ಸ್ಯಸಂಪದ ಯೋಜನೆಯಡಿ ಈ ಸೌಲಭ್ಯ ಒದಗಿಸಲಾಗಿದೆ. ಮೀನುಗಾರರಿಗೆ ಕಿಸಾನ್ ಕಾರ್ಡ್ ಸೌಲಭ್ಯವನ್ನು ವಿಸ್ತರಿಸಲಾಗಿದೆ. ಇದರಿಂದ ಸುಲಭದಲ್ಲಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ರಾಜ್ಯ ಸರಕಾರ ಕೂಡ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ನುಡಿದರು.
ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು