ಇತ್ತೀಚಿನ ಸುದ್ದಿ
ಮಂಗಳೂರಿಗೆ ಪ್ರಧಾನಿ ಭೇಟಿ: ಬಸ್ ಸಂಚಾರ ಸ್ಥಗಿತ; ಜನಸಾಮಾನ್ಯರ ಪರದಾಟ; ಮಾಹಿತಿ ನೀಡದ ಕೆಎಸ್ಸಾರ್ಟಿಸಿ
02/09/2022, 19:19
ಮಂಗಳೂರು/ಚಿಕ್ಕಮಗಳೂರು(reporterkarnataka.com):
ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು, ಚಿಕ್ಕಮಗಳೂರು, ಹಾಸನ ಮತ್ತು ಮಡಿಕೇರಿ ಜಿಲ್ಲೆಗಳ ಪ್ರಯಾಣಿಕರು ಬಸ್ ಇಲ್ಲದೆ ಪರದಾಡಬೇಕಾಯಿತು. ಚಿಕ್ಕಮಗಳೂರಿನಿಂದ ಮಂಗಳೂರು ಮಾರ್ಗ-ಮಂಗಳೂರು ಮಾರ್ಗದಿಂದ ಚಿಕ್ಕಮಗಳೂರು ಬರುವ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಚಿಕ್ಕಮಗಳೂರು ಮೂಡಿಗೆರೆ ಕೊಟ್ಟಿಗೆಹಾರ ಮಾರ್ಗದಿಂದ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸುಗಳು ಬೆಳೆಗ್ಗೆ 6 ರಿಂದ ಸ್ಥಗಿತಗೊಳಿಸಲಾಗಿತ್ತು.

ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಯಿತು. ಬಸ್ ಸ್ಥಗಿತದ ಕುರಿತು
ಚಿಕ್ಕಮಗಳೂರು ಕೆಎಸ್ಸಾರ್ಟಿಸಿಯ ಹಿರಿಯ ಅಧಿಕಾರಿಗಳು ಯಾವುದೇ ಪ್ರಕಟಣೆಯಲ್ಲಿ ತಿಳಿಸಿಲ್ಲ ಎಂದು ಪ್ರಯಾಣಿಕರು ಅವರ ಮೇಲೆ ಹಿಡಿ ಶಾಪ ಹಾಕಿ ಮನೆಗೆ ತೆರಳುತ್ತಿದ್ದದ್ದು ಕಂಡು ಬಂತು.


















