12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿದೇಶಗಳಿಗೆ ತೆರಳುವ‌ವರಿಗೆ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ಲಸಿಕೆ: ಶಾಸಕ ವೇದವ್ಯಾಸ ಕಾಮತ್  ಪರಿಶೀಲನೆ  

25/06/2021, 19:20

ಮಂಗಳೂರು(reporterkarnataka news): ಉದ್ಯೋಗ, ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ‌ವರಿಗೆ ಲಸಿಕೆ ವಿತರಣೆಯು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯುತ್ತಿದ್ದು,

ಶಾಸಕ ಡಿ. ವೇದವ್ಯಾಸ್ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಉದ್ಯೋಗಕ್ಕಾಗಿ, ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಕೈಗೊಳ್ಳುವವರಿಗೆ ವಾರಾಂತ್ಯದ ದಿನಗಳಲ್ಲಿ ಲಸಿಕೆ ವಿತರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇಂದು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲ್ ನಲ್ಲಿ ನಡೆಯುವ ಲಸಿಕಾ ಶಿಬಿರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಾಯಿತು ಎಂದರು.

ಜಿಲ್ಲೆಯ ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡಲು ನಮ್ಮ ಸರಕಾರ, ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಡಳಿತ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ಸಹಕಾರದೊಂದಿಗೆ ಅಶಕ್ತರಿಗಾಗಿ ಸಂಚಾರಿ ವಾಹನವನ್ನು ಕೂಡ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯ ನಿರ್ವಹಿಸುತಿದ್ದು ಜಿಲ್ಲೆಯ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ  ಚೇರ್ ಮೆನ್ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮ, ರೋಟರಿ‌ ಸಂಸ್ಥೆಯ ಪ್ರಮುಖರಾದ ಯತೀಶ್ ಬೈಕಾಂಪಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು