8:06 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು!

03/09/2022, 23:15

ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ 
ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ.

ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ನಿಡ್ಲೆ ಕುದ್ರಾಯ ಸಮೀಪ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೈಕ್ ನಿಲ್ಲಿಸಲಾಗುತ್ತಿದ್ದ ವ್ಯಕ್ತಿ ಯಾರು ಎಂಬುದು ಇಲ್ಲಿನ ಸ್ಥಳೀಯರ ಬಹುದೊಡ್ಡ ಪ್ರಶ್ನೆಯಾಗಿತ್ತು. ಅಲ್ಲದೇ ಅಕ್ರಮ ಸಂಬಂಧ ಎಂಬ ಸುದ್ದಿ ಹಬ್ಬಿದ್ದು ಸ್ಥಳೀಯ ಕೆಲ ಕೆಂಪು ಬೈಕು ಹೊಂದಿದವರ ಮೇಲೆ ಅನುಮಾನದ ಮಾತುಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಬೈಕ್ ಇದ್ದದ್ದನ್ನು ಗಮನಿಸಿದ ಸ್ಥಳೀಯರು, ಆತ ಯಾರು ಎಂದು ತಿಳಿಯಲು ರಾತ್ರಿ ಕಾದು ಮುಂಜಾನೆ 5ರ ವೇಳೆಗೆ ಆತನನ್ನು ಹಿಡಿದಿದ್ದಾರೆ.

ಇನ್ನು ಧರ್ಮಸ್ಥಳ ಸಮೀಪದ ಅಶೋಕನಗರದ ನಿವಾಸಿಯಾಗಿರುವ ಈ ಯುವಕ, ತನ್ನ ಸ್ನೇಹಿತೆ ಅಪ್ರಾಪ್ತ ಬಾಲಕಿಯೋರ್ವಳೊಂದಿಗೆ ಸಂಬಂಧ ಇಟ್ಟುಕೊಂಡಿರುವುದಾಗಿ ತಿಳಿದು ಬಂದಿದೆ.

ಅಲ್ಲದೇ ಆತ ತಡರಾತ್ರಿ ಸ್ನೇಹಿತೆಯ ಮನೆಗೆ ಬಂದು ಮನೆಯವರಿಗೆ ತಿಳಿಯದಂತೆ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದ, ಇದನ್ನು ಕಂಡ ಸ್ಥಳೀಯರು ಆತನನ್ನು ಹಿಡಿದಿದ್ದಾರೆ.

ಸದ್ಯ ಬಾಲಕಿಯ ಕಡೆಯವರ ದೂರಿನ ಹಿನ್ನಲೆಯಲ್ಲಿ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು