8:46 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು!

03/09/2022, 23:15

ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ 
ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ.

ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ನಿಡ್ಲೆ ಕುದ್ರಾಯ ಸಮೀಪ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೈಕ್ ನಿಲ್ಲಿಸಲಾಗುತ್ತಿದ್ದ ವ್ಯಕ್ತಿ ಯಾರು ಎಂಬುದು ಇಲ್ಲಿನ ಸ್ಥಳೀಯರ ಬಹುದೊಡ್ಡ ಪ್ರಶ್ನೆಯಾಗಿತ್ತು. ಅಲ್ಲದೇ ಅಕ್ರಮ ಸಂಬಂಧ ಎಂಬ ಸುದ್ದಿ ಹಬ್ಬಿದ್ದು ಸ್ಥಳೀಯ ಕೆಲ ಕೆಂಪು ಬೈಕು ಹೊಂದಿದವರ ಮೇಲೆ ಅನುಮಾನದ ಮಾತುಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಬೈಕ್ ಇದ್ದದ್ದನ್ನು ಗಮನಿಸಿದ ಸ್ಥಳೀಯರು, ಆತ ಯಾರು ಎಂದು ತಿಳಿಯಲು ರಾತ್ರಿ ಕಾದು ಮುಂಜಾನೆ 5ರ ವೇಳೆಗೆ ಆತನನ್ನು ಹಿಡಿದಿದ್ದಾರೆ.

ಇನ್ನು ಧರ್ಮಸ್ಥಳ ಸಮೀಪದ ಅಶೋಕನಗರದ ನಿವಾಸಿಯಾಗಿರುವ ಈ ಯುವಕ, ತನ್ನ ಸ್ನೇಹಿತೆ ಅಪ್ರಾಪ್ತ ಬಾಲಕಿಯೋರ್ವಳೊಂದಿಗೆ ಸಂಬಂಧ ಇಟ್ಟುಕೊಂಡಿರುವುದಾಗಿ ತಿಳಿದು ಬಂದಿದೆ.

ಅಲ್ಲದೇ ಆತ ತಡರಾತ್ರಿ ಸ್ನೇಹಿತೆಯ ಮನೆಗೆ ಬಂದು ಮನೆಯವರಿಗೆ ತಿಳಿಯದಂತೆ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದ, ಇದನ್ನು ಕಂಡ ಸ್ಥಳೀಯರು ಆತನನ್ನು ಹಿಡಿದಿದ್ದಾರೆ.

ಸದ್ಯ ಬಾಲಕಿಯ ಕಡೆಯವರ ದೂರಿನ ಹಿನ್ನಲೆಯಲ್ಲಿ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು