7:24 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು!

03/09/2022, 23:15

ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ 
ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ.

ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ನಿಡ್ಲೆ ಕುದ್ರಾಯ ಸಮೀಪ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೈಕ್ ನಿಲ್ಲಿಸಲಾಗುತ್ತಿದ್ದ ವ್ಯಕ್ತಿ ಯಾರು ಎಂಬುದು ಇಲ್ಲಿನ ಸ್ಥಳೀಯರ ಬಹುದೊಡ್ಡ ಪ್ರಶ್ನೆಯಾಗಿತ್ತು. ಅಲ್ಲದೇ ಅಕ್ರಮ ಸಂಬಂಧ ಎಂಬ ಸುದ್ದಿ ಹಬ್ಬಿದ್ದು ಸ್ಥಳೀಯ ಕೆಲ ಕೆಂಪು ಬೈಕು ಹೊಂದಿದವರ ಮೇಲೆ ಅನುಮಾನದ ಮಾತುಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಬೈಕ್ ಇದ್ದದ್ದನ್ನು ಗಮನಿಸಿದ ಸ್ಥಳೀಯರು, ಆತ ಯಾರು ಎಂದು ತಿಳಿಯಲು ರಾತ್ರಿ ಕಾದು ಮುಂಜಾನೆ 5ರ ವೇಳೆಗೆ ಆತನನ್ನು ಹಿಡಿದಿದ್ದಾರೆ.

ಇನ್ನು ಧರ್ಮಸ್ಥಳ ಸಮೀಪದ ಅಶೋಕನಗರದ ನಿವಾಸಿಯಾಗಿರುವ ಈ ಯುವಕ, ತನ್ನ ಸ್ನೇಹಿತೆ ಅಪ್ರಾಪ್ತ ಬಾಲಕಿಯೋರ್ವಳೊಂದಿಗೆ ಸಂಬಂಧ ಇಟ್ಟುಕೊಂಡಿರುವುದಾಗಿ ತಿಳಿದು ಬಂದಿದೆ.

ಅಲ್ಲದೇ ಆತ ತಡರಾತ್ರಿ ಸ್ನೇಹಿತೆಯ ಮನೆಗೆ ಬಂದು ಮನೆಯವರಿಗೆ ತಿಳಿಯದಂತೆ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದ, ಇದನ್ನು ಕಂಡ ಸ್ಥಳೀಯರು ಆತನನ್ನು ಹಿಡಿದಿದ್ದಾರೆ.

ಸದ್ಯ ಬಾಲಕಿಯ ಕಡೆಯವರ ದೂರಿನ ಹಿನ್ನಲೆಯಲ್ಲಿ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು