1:33 PM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಪುತ್ತೂರು: ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ಸಿಗೆ ಗುದ್ದಿದ ಬೈಕ್; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನಿಗೆ ಗಾಯ

04/09/2022, 20:07

ಪುತ್ತೂರು(reporterkarnataka.com): ಪರ್ಲಡ್ಕ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರರಾದ.ವೀರಮಂಗಲ ಖಂಡಿಗೆಯ ಭರತ್ ರಾಜ್ ಗೌಡ (22) ಮೃತಪಟ್ಟಿದ್ದು,ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಧನುಷ್(24) ಗಾಯಗೊಂಡಿದ್ದಾರೆ.

ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್‌ ಶನಿವಾರ ದಂದು ಬೈಕ್‌ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ ಬರುವ ವೇಳೆ ಪರ್ಲಡ್ಕ ರಸ್ತೆಯಲ್ಲಿ ಸವಾರನ ನಿಯಂತ್ರಣ ತಪ್ಪಿ ಬೈಕ್‌ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು, ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯ ಭಾಗಕ್ಕೆ ಗುದ್ದಿದೆ.

ಇದರಿಂದಾಗಿ ಭರತ್‌ ರಾಜ್‌ ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಬೈಕ್‌ನಲ್ಲಿದ್ದ ಇನ್ನೋರ್ವ ಧನುಷ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು