8:00 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇ ನಮಃ

05/09/2022, 12:37

“ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ” ಎಂಬ ದಾಸರ ಹಾಡಿನ ಸಾಲಿನಂತೆ ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಪಾತ್ರ ಮಹತ್ತರವಾದದ್ದು. ಶಿಲೆಯಂತಿದ್ದ ಮಗುವನ್ನು ಸುಂದರ ಶಿಲ್ಪವನ್ನಾಗಿಸುವವನೇ ಶಿಕ್ಷಕ. “ವ್ಯಕ್ತಿಯ ಜೀವನದಲ್ಲಿ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು”, ಜೀವನದಲ್ಲಿ ಗುರಿಯನ್ನು ಸರಿಯಾದ ರೀತಿಯಲ್ಲಿ ತಲುಪಲು, ಸುಂದರವಾದ ಭವಿಷ್ಯವನ್ನು ರೂಪಿಸಲು ಗುರುವಿನ ಪಾತ್ರ ಪ್ರಮುಖವಾದದ್ದು.

ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರು ಒಂದಲ್ಲ ಒಂದು ರೀತಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ. ಬದುಕಿನಲ್ಲಿ ಶಿಕ್ಷಕರ ಪ್ರತಿಯೊಂದು ನಡೆ ನುಡಿ, ಕಾರ್ಯಗಳು ವಿದ್ಯಾರ್ಥಿಗಳ ಪಾಲಿಗೆ ಮಾರ್ಗದರ್ಶನೀಯವಾಗಿದೆ. ಪ್ರತಿ ವರ್ಷ ಸೆಪ್ಟೆಂಬರ್ 5 ಬಂತೆಂದರೆ ಎಲ್ಲರೂ ಒಮ್ಮೆ ತಮ್ಮ ಜೀವನವನ್ನು ರೂಪಿಸಿದ ಶಿಕ್ಷಕರನ್ನು ನೆನೆಯುವಂತಹ ದಿನ .
ಸೆಪ್ಟೆಂಬರ್ 5 ನ್ನು ಭಾರತದ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ನೆನಪಿಗಾಗಿ ಆಚರಿಸುತ್ತೇವೆ. ರಾಧಾಕೃಷ್ಣನ್ ರವರು ಶಿಕ್ಷಕರಾಗಿದ್ದುಕೊಂಡು ಭಾರತ ದೇಶದ ರಾಷ್ಟ್ರಪತಿ ಹುದ್ದೆಯಲ್ಲಿ ವಿರಾಜಮಾನರಾದವರು . ಒಬ್ಬ ಶಿಕ್ಷಕ ಮನಸ್ಸು ಮಾಡಿದ್ದಲ್ಲಿ ರಾಷ್ಟ್ರದ ಉನ್ನತ ಹುದ್ದೆಗೆರಬಹುದು ಎಂಬುದಕ್ಕೆ ರಾಧಾಕೃಷ್ಣನ್ ರವರೇ ಸಾಕ್ಷಿ .

ಸರಳತೆ ,ಸಜ್ಜನಿಕೆ , ಕಾರ್ಯನಿಷ್ಠತೆ ವೃತ್ತಿ ಬದ್ಧತೆ, ಜ್ಞಾನದ ಗಣಿಯಂತಿರುವ ರಾಧಾಕೃಷ್ಣನ್ ರವರ ಜೀವನ ಇಂದಿನ ಎಲ್ಲರಿಗೂ ಆದರ್ಶ ಪ್ರಾಯವಾಗಿದೆ. ಶಿಕ್ಷಕ ವೃತ್ತಿಯನ್ನು ಕಾಯ, ವಾಚ, ಮನಸಾ ಶ್ರದ್ಧೆಯಿಂದ, ಸೇವಾ ಮನೋಭಾವನೆಯಿಂದ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸಿ,
ಭವ್ಯ ಭಾರತದ ನಿರ್ಮಾಣ ಮಾಡುವುದು ಎಲ್ಲಾ ಶಿಕ್ಷಕರ ಜವಾಬ್ದಾರಿಯಾಗಿದೆ..

ಎಲ್ಲರಿಗೂ ಶಿಕ್ಷಕ ದಿನಾಚರಣೆಯ ಶುಭಾಶಯಗಳು

ಇತ್ತೀಚಿನ ಸುದ್ದಿ

ಜಾಹೀರಾತು