6:51 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ.38.03 ಲಕ್ಷ ರೂ. ಮೌಲ್ಯದ ಆಹಾರ ಕಿಟ್, ವೈದ್ಯಕೀಯ ಪರಿಕರ, ಪಿಪಿಇ ಕಿಟ್, ಸ್ಯಾನಿಟೈಸರ್ ವಿತರಣೆ

26/06/2021, 08:11

ಮಂಗಳೂರು(reporterkarnataka news): ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ ತಿಂಗಳ ಆರಂಭದಿಂದ ಇದುವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ಕಿಟ್ ಹಾಗೂ ಉಭಯ ಜಿಲ್ಲೆಗಳಿಗೆ ವೈದ್ಯಕೀಯ ಪರಿಕರ, ಬಡವರಿಗೆ ವೈದ್ಯಕೀಯ ಚಿಕಿತ್ಸೆ ಹಾಗೂ ಮಾಸ್ಕ್, ಸ್ಯಾನಿಟೈಸರ್ , ಪಿಪಿಇ ಕಿಟ್, ಗ್ಲೌಸ್ ವಿತರಿಸಲು ಒಟ್ಟು 38.03 ಲಕ್ಷ ರೂ. ವ್ಯಯಿಸಲಾಗಿದೆ

ಕೊರೊನಾ ಲಾಕ್ ಡೌನ್ ಸಮಯದಲ್ಲಿ ಉಭಯ ಜಿಲ್ಲೆಗಳ ಬಡ ಕುಟುಂಬಗಳಿಗೆ 1538 ಆಹಾರ ಕಿಟ್ ಗಳನ್ನು ವಿತರಿಸಲಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ 6.16 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ನೀಡಲಾಗಿದೆ. ಬಂಟ್ವಾಳ ತಾಲೂಕಿನ ಸೇವಾ ಭಾರತಿಗೆ 45 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಗ್ಲೌಸ್, ಸ್ಯಾನಿಟೈಸರ್  ಮತ್ತು ಮಾಸ್ಕ್ ನೀಡಲಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಕರ್ತವ್ಯದಲ್ಲಿದ್ದ ಸುಮಾರು 100 ಮಂದಿ ಪೊಲೀಸರಿಗೆ ಟೀ ಮತ್ತು ಫಲಾಹಾರ ಒದಗಿಸಲಾಗಿದೆ. 45 ಮಂದಿ  ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಗಿದೆ. ಮಂಗಳೂರು ಟ್ರಾಫಿಕ್ ಪೊಲೀಸರಿಗೆ ಸ್ಯಾನಿಟೈಸರ್, ಫೇಸ್ ಮಾಸ್ಕ್, ಫೇಸ್ ಸೀಲ್ಡ್ ನೀಡಲಾಗಿದೆ. 18 ಮಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ 13,47,441 ರೂ. ವ್ಯಯಿಸಲಾಗಿದೆ.

ಈ ಎಲ್ಲ ಸೇವಾ ಕಾರ್ಯಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಒಟ್ಟು 38,03,412 ರೂ. ಖರ್ಚುಮಾಡಲಾಗಿದೆ.

ಈ ಎಲ್ಲ ಸೌಲಭ್ಯ ವಿತರಣೆ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು