9:18 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹಳೆ ಪ್ರಶ್ನೆ ಪತ್ರಿಕೆ ಪೂರೈಕೆ; ಬಿಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

06/09/2022, 13:39

ಮಂಗಳೂರು(Reporterkarnataka.com):ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮುಂದೂಡಲಾಗಿದೆ.

ಸೋಮವಾರ ಬಿಬಿಎ ವಿದ್ಯಾರ್ಥಿಗಳಿಗೆ ಮೊದಲ ದಿನ ಕನ್ನಡ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ ‘ದ್ವಿತೀಯ ಸೆಮಿಸ್ಟರ್’ ಎಂದು ಬರೆಯಲಾಗಿತ್ತು.

ಆದರೆ ಅಲ್ಲಿ ಮುದ್ರಣವಾಗಿರುವ ಪ್ರಶ್ನೆಗಳು ಹಿಂದಿನ ಸೆಮಿಸ್ಟರ್‌ನದಾಗಿದ್ದವು. ಪರೀಕ್ಷೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಈ ಪ್ರಮಾದ ಗಮನಕ್ಕೆ ಬಂದಿದೆ. ತಕ್ಷಣ ಮಾಹಿತಿ ಪಡೆದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿದೆ.

ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ ಪಿ ಎಲ್ ಧರ್ಮ ಅವರು ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ. ಹೊಸ ಪ್ರಶ್ನೆ ಪತ್ರಿಕೆಯೊಂದಿಗೆ ಶೀಘ್ರ ಪರೀಕ್ಷೆ ನಡೆಸುವುದಾಗಿ ತಿಳಿಸಲಾಗಿದೆ.

ಪ್ರಶ್ನೆಪತ್ರಿಕೆ ಎಡವಟ್ಟು ಸಂಬಂಧ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಕಾಲೇಜುಗಳಿಗೆ ಪೂರೈಸುವ ಹೊಣೆ ಹೊತ್ತ ಸಂಬಂಧಪಟ್ಟ ಪರೀಕ್ಷಾ ವಿಭಾಗದ ಮುಖ್ಯಸ್ಥರಿಗೆ ಮಂಗಳೂರು ವಿಶ್ವವಿದ್ಯಾಲಯ ನೋಟಿಸ್ ಜಾರಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು