2:01 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಹಳೆ ಪ್ರಶ್ನೆ ಪತ್ರಿಕೆ ಪೂರೈಕೆ; ಬಿಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

06/09/2022, 13:39

ಮಂಗಳೂರು(Reporterkarnataka.com):ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮುಂದೂಡಲಾಗಿದೆ.

ಸೋಮವಾರ ಬಿಬಿಎ ವಿದ್ಯಾರ್ಥಿಗಳಿಗೆ ಮೊದಲ ದಿನ ಕನ್ನಡ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ ‘ದ್ವಿತೀಯ ಸೆಮಿಸ್ಟರ್’ ಎಂದು ಬರೆಯಲಾಗಿತ್ತು.

ಆದರೆ ಅಲ್ಲಿ ಮುದ್ರಣವಾಗಿರುವ ಪ್ರಶ್ನೆಗಳು ಹಿಂದಿನ ಸೆಮಿಸ್ಟರ್‌ನದಾಗಿದ್ದವು. ಪರೀಕ್ಷೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಈ ಪ್ರಮಾದ ಗಮನಕ್ಕೆ ಬಂದಿದೆ. ತಕ್ಷಣ ಮಾಹಿತಿ ಪಡೆದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿದೆ.

ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ ಪಿ ಎಲ್ ಧರ್ಮ ಅವರು ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ. ಹೊಸ ಪ್ರಶ್ನೆ ಪತ್ರಿಕೆಯೊಂದಿಗೆ ಶೀಘ್ರ ಪರೀಕ್ಷೆ ನಡೆಸುವುದಾಗಿ ತಿಳಿಸಲಾಗಿದೆ.

ಪ್ರಶ್ನೆಪತ್ರಿಕೆ ಎಡವಟ್ಟು ಸಂಬಂಧ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಕಾಲೇಜುಗಳಿಗೆ ಪೂರೈಸುವ ಹೊಣೆ ಹೊತ್ತ ಸಂಬಂಧಪಟ್ಟ ಪರೀಕ್ಷಾ ವಿಭಾಗದ ಮುಖ್ಯಸ್ಥರಿಗೆ ಮಂಗಳೂರು ವಿಶ್ವವಿದ್ಯಾಲಯ ನೋಟಿಸ್ ಜಾರಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು