9:51 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಎಸಿಬಿ ರದ್ದತಿ ವಿರುದ್ಧ ಅರ್ಜಿ: ವಿಚಾರಣೆಗೆ  ಸುಪ್ರೀಂ ಕೋರ್ಟ್ ನಕಾರ

06/09/2022, 15:18

ಹೊಸದಿಲ್ಲಿ(reporterkarnataka.com): ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಕನಕರಾಜು ಎಂಬುವರು ಸುಪ್ರೀಂ ಕೋರ್ಟ್‌ಗೆ ಆಗಸ್ಟ್‌ 23ರಂದು ಮೇಲ್ಮನವಿ ಸಲ್ಲಿಸಿದ್ದರು.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಕನಕರಾಜು ಎಂಬುವರು ಸುಪ್ರೀಂ ಕೋರ್ಟ್‌ಗೆ ಆಗಸ್ಟ್‌ 23ರಂದು ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತ್ತು.

ಸೋಮವಾರ ಈ ಪ್ರಕರಣವು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠದ ಎದುರು ಬಂತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್‌ ರೊಹಟಗಿ ಅವರನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, ‘ಕನಕರಾಜು ಅವರ ಮನವಿಯನ್ನು ನ್ಯಾಯಾಲಯ ಏಕೆ ಪರಿಗಣಿಸಬೇಕು’ ಎಂದು ಕೇಳಿದರು.

ರೊಹಟಗಿ ವಾದ ಮಂಡಿಸಿ, ‘ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಬೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಕನಕರಾಜು ಅವರು ಎಸಿಬಿಯಲ್ಲಿ ದೂರು ಸಲ್ಲಿಸಿದ್ದರು. ಅವರು ದೂರುದಾರರಾಗಿದ್ದಾರೆ. ಜತೆಗೆ, ಹೈಕೋರ್ಟ್‌ ಆದೇಶವನ್ನು ಕರ್ನಾಟಕ ಸರ್ಕಾರ ಸಹ ಪ್ರಶ್ನಿಸಿದೆ ಎಂದು ಕನಕರಾಜು ಹೇಳಿದ್ದಾರೆ’ ಎಂದರು.

ಆಗ ನ್ಯಾಯಮೂರ್ತಿಗಳು, ‘ಹಾಗಿದ್ದರೆ ರಾಜ್ಯ ಸರ್ಕಾರದ ಅರ್ಜಿಯೊಂದಿಗೆ ಪ್ರಕರಣದ ವಿಚಾರಣೆಯನ್ನು ಮುಂದೂಡುತ್ತೇವೆ’ ಎಂದು ತಿಳಿಸಿದರು.

ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಲು 2016ರಲ್ಲಿ ರಚಿಸಲಾಗಿದ್ದ ಎಸಿಬಿಯನ್ನು 2022ರ ಆಗಸ್ಟ್‌ 11ರಂದು ರದ್ದುಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು