2:06 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಚೀನಾದಲ್ಲಿ ಭಾರೀ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.8 ದಾಖಲು; ಮೃತರ ಸಂಖ್ಯೆ 65ಕ್ಕೆ ಏರಿಕೆ

06/09/2022, 23:14

ಬೀಜಿಂಗ್‌(reporterkarnataka.com): ಟಿಬೆಟ್‌ ಸಮೀಪದ ಚೀನಾದ ಸಿಚುವಾನ್‌ ಪ್ರಾಂತ್ಯದಲ್ಲಿ ಸೋಮವಾರ ಸಂಭವಿಸಿದ 6.8ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 65ಕ್ಕೆ ಏರಿದೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

ಸಿಚುವಾನ್‌ ಪ್ರಾಂತ್ಯದ ಲುಡಿಂಗ್‌ ಕೌಂಟಿಯ ಮುಖ್ಯ ಪಟ್ಟಣದಲ್ಲಿ ಸಂಭವಿಸಿದ ಭೂಕಂಪನದ ಬಳಿಕ ಕನಿಷ್ಠ 16 ಮಂದಿ ನಾಪತ್ತೆಯಾಗಿದ್ದಾರೆ. ಟಿಬೆಟಿಯನ್ ಸ್ವಾಯತ್ತ ಪ್ರಾಂತ್ಯ ಗಾರ್ಜ್‌ನ ಐತಿಹಾಸಿಕ ಪಟ್ಟಣ ಮೋಕ್ಸಿಯಲ್ಲಿ 37 ಮಂದಿ ಮತ್ತು ಶಿಮಿಯಾನ್‌ ಕೌಂಟಿ ಪ್ರದೇಶದಲ್ಲಿ 28 ಮಂದಿ ಮೃತಪಟ್ಟಿದ್ದಾರೆ. ಭೂಕಂಪನದ ಪರಿಣಾಮ ಪರ್ವತ ಪ್ರದೇಶಗಳಿಂದ ಬಂಡೆಗಳು ಬಿದ್ದು ಸಾಕಷ್ಟು ಮನೆಗಳು ಹಾನಿಗೊಳಗಾಗಿವೆ, ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

50 ಸಾವಿರ ಜನರ ಸ್ಥಳಾಂತರ: ಭೂಕಂಪನದ ಪರಿಣಾಮ ಮನೆಗಳನ್ನು ಕಳೆದುಕೊಂಡ 50,000 ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಚರಣೆಯಲ್ಲಿ 6,500 ಜನರು, ನಾಲ್ಕು ಹೆಲಿಕಾಪ್ಟರ್‌ ಮತ್ತು ಎರಡು ಮಾನವ ರಹಿತ ವೈಮಾನಿಕ ವಾಹನಗಳನ್ನು ನಿಯೋಜಿಸಲಾಗಿದೆ.

ಲಾಕ್‌ಡೌನ್‌ ಮುಂದುವರಿಕೆ: ಭೂಕಂಪನದ ತೀವ್ರತೆಯ ಪರಿಣಾಮ 200 ಕಿ.ಮೀ.ದೂರದ ಚೆಂಗ್‌ಡು ನಗರದಲ್ಲೂ ಕಟ್ಟಡಗಳು ಅಲುಗಾಡಿದ್ದವು. ಆದಾಗ್ಯೂ 2.1 ಕೋಟಿ ಜನಸಂಖ್ಯೆ ಇರುವ ಈ ನಗರದಲ್ಲಿ ಕಠಿಣ ಕೋವಿಡ್‌ ಲಾಕ್‌ಡೌನ್ ಮುಂದುವರಿಸಲಾಗಿದೆ. ಜನರು ಮನೆಯಿಂದ ಹೊರಬರದಂತೆ  ಅಧಿಕಾರಿಗಳು ನಿರ್ಬಂಧಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು