1:27 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಪುತ್ತೂರಿನ ‘ಬಿಂದು’ ಖರೀದಿಗೆ ಮುಂದಾದ ಅಂಬಾನಿ; ರಿಲಯನ್ಸ್ ನ ಬಹುಕೋಟಿ ಆಫರ್ ತಿರಸ್ಕರಿಸಿದ  ಎಸ್ ಜಿ ಗ್ರೂಪ್ 

07/09/2022, 17:34

ಮುಂಬೈ/ಮಂಗಳೂರು(reporterkarnataka.com): ಅಂಬಾನಿಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಖರೀದಿಗೆ ಮುಂದಾಗಿದೆ.  ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಈ ಉದ್ಯಮದ ಮೇಲೆ ರಿಲಯನ್ಸ್ ಕಣ್ಣು ಇಟ್ಟಿದೆ. ಆದರೆ ಈ ಆಫರನ್ನು ಪುತ್ತೂರಿನ ಸಂಸ್ಥೆ ಮಾತ್ರ ತಿರಸ್ಕರಿಸಿದೆ.
ಸಣ್ಣ ಉದ್ಯಮ, ಏಷ್ಯಾದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ರಿಲಯನ್ಸ್ ಕಣ್ಣಿಗೆ ಬಿದ್ದಿದ್ದು,ಬಹುಕೋಟಿ ಆಫರ್ ಕೂಡಾ ಮಾಡಿದೆ. ಆದರೆ ಪುತ್ತೂರಿನ ಕಂಪನಿ ಮಾತ್ರ ಅಂಬಾನಿಯ ಆಫರ್ ಆನ್ನು ನಯವಾಗಿ ತಿರಸ್ಕರಿಸಿದ್ದು, ಕಂಪನಿ ಬೆಳೆಸುವ ಉದ್ದೇಶ ವ್ಯಕ್ತಪಡಿಸಿದೆ. ಮಾರಾಟ ಮಾಡುವ ಉದ್ದೇಶ ಖಂಡಿತಾ ಇಲ್ಲವೆಂದು ನೇರವಾಗಿ ಸ್ಪಷ್ಟಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ‘ಬಿಂದು’ ಬ್ರ್ಯಾಂಡ್ ಖ್ಯಾತಿಯ ಎಸ್ ಜಿ ಕಂಪನಿಯ ಮೆಗಾ ಫ್ರೂಟ್ ಪ್ರೊಸೆಸಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಖರೀದಿಗೆ ರಿಲಯನ್ಸ್ ಮುಂದಾಗಿತ್ರು. ಆದರೆ ದೈತ್ಯ ಸಂಸ್ಥೆಯ ಆಫರನ್ನು ಎಸ್ ಜಿ ಗ್ರೂಪ್ ನಯವಾಗಿ ತಿರಸ್ಕರಿಸಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಎಸ್ ಜಿ ಕಾರ್ಪೋರೇಟ್ಸ್ ಆಡಳಿತ ನಿರ್ದೇಶಕ ಸತ್ಯಶಂಕರ್, ಈ ಹಿಂದೆಯೂ ವಿಪ್ರೋ, ಕೋಕೋ ಕೋಲಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಕಂಪನಿಗಳು ನಮ್ಮ ಕಂಪನಿ ಖರೀದಿಗೆ ಆಸಕ್ತಿ ತೋರಿಸಿದ್ದವು. ಈಗ ರಿಲಯನ್ಸ್ ಕಂಪೆನಿ ಕೂಡಾ ದೊಡ್ಡ ಆಫರ್ ನೀಡಿದೆ. ಉದ್ಯಮ ವಲಯದಲ್ಲಿ ಇದೆಲ್ಲಾ ಸಾಮಾನ್ಯ ವಿಷಯ. ಆದರೆ ನಾವು ಯಾವುದೇ ಕಾರಣಕ್ಕೂ ಕಂಪೆನಿಯನ್ನು ಮಾರಾಟ ಮಾಡಲ್ಲ ಎಂದಿದ್ದಾರೆ.
ಪ್ರಾರಂಭದಲ್ಲಿ ಆಟೋ ಚಾಲಕರಾಗಿದ್ದ ಸತ್ಯಶಂಕರ್ ಭಟ್ ಬಳಿಕ ಪುತ್ತೂರಿನ ಕುಗ್ರಾಮದಲ್ಲಿ ಸ್ವಂತ ಉದ್ದಿಮೆ ಆರಂಭಿಸಿದರು. ‘ಬಿಂದು’ ಕುಡಿಯುವ ನೀರು ಘಟಕ ಆರಂಭಿಸಿ ಯಶಸ್ವಿ ಯಾಗಿದ್ದಾರೆ. ಕುಗ್ರಾಮದಲ್ಲಿ ಬೆರಳೆಣಿಕೆಯ ಕಾರ್ಮಿಕರಿಂದ ಆರಂಭವಾದ ಬಿಂದು ಉದ್ಯಮ, ಇಂದು 500 ಕೋಟಿ ರೂಪಾಯಿ ವಾರ್ಷಿಕ ವ್ಯವಹಾರ ಮಾಡುತ್ತಿದೆ. 2025ರ ವೇಳೆ‌ಗೆ ಒಂದು ಸಾವಿರ ಕೋಟಿ ರೂಪಾಯಿ ವಾರ್ಷಿಕ ವ್ಯವಹಾರ ಮಾಡುವ ಗುರಿಯನ್ನು ಹೊಂದಿದೆ.

ದಕ್ಷಿಣ ಭಾರತದಾದ್ಯಂತ ಮಾರುಕಟ್ಟೆ ಹೊಂದಿರುವ ಬಿಂದು ಗ್ರೂಪ್ ಅಮೇರಿಕಾ, ಗಲ್ಫ್ ರಾಷ್ಟ್ರ ಸೇರಿದಂತೆ ವಿದೇಶಿ ಮಾರುಕಟ್ಟೆಯನ್ನೂ ಹೊಂದಿದೆ. ಉತ್ತರ ಭಾರತ ಮತ್ತು ಮಧ್ಯ ಭಾರತಕ್ಕೂ ಮಾರುಕಟ್ಟೆ ವಿಸ್ತರಿಸುವ ಉದ್ದೇಶದಿಂದ ಹೊಸದಾಗಿ ಹೈದರಾಬಾದ್ ನಲ್ಲೂ ಬಿಂದು ಗ್ರೂಪ್ ಬೃಹತ್ ಘಟಕ ಆರಂಭಿಸಿದೆ.
ಎಸ್ ಜಿ ಕಂಪೆನಿ, ಬಿಂದು ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್, ಬಿಂದು ಜೀರಾ ಫಿಜ್, ಬಿಂದು ಲೆಮನ್, ಸಿಪ್ ಆನ್ ಬ್ರ್ಯಾಂಡ್ ನಲ್ಲಿ ಮ್ಯಾಂಗೋ, ಮ್ಯಾಂಗೋ ಮಿಲ್ಕ್ ಶೇಕ್, ಲೆಮನ್ ವಿತ್ ಮಿಂಟ್, ಆ್ಯಪಲ್, ಪೇರಳೆ, ಲಿಚ್ಚಿ, ದಾಳಿಂಬೆ, ಪುನರ್ಪುಳಿ, ಸ್ಟ್ರಾಬರಿ, ಫ್ರೋಜನ್ ಬ್ರ್ಯಾಂಡ್ ನಲ್ಲಿ ಗ್ರೀನ್ ಅ್ಯಪಲ್, ಆರೆಂಜ್, ಆಯಪಲ್, ಶುಂಠಿ, ಸ್ಟ್ರಾಬರಿ, ಝಿವೋ ಬ್ರ್ಯಾಂಡ್ ನಲ್ಲಿ ಸೋಡಾ, ಕೋಲಾ ಹಾಗೂ ಸ್ನ್ಯಾಕ್ ಆಪ್ ನಲ್ಲಿ 15 ತರಹದ ತಿಂಡಿಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು