12:22 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲ: ಶಾಸಕ ವೇದವ್ಯಾಸ ಕಾಮತ್ ಅಭಿಮತ

07/09/2022, 23:03

ಮಂಗಳೂರು(reporterkarnataka.com):ಮಂಗಳೂರು ನಗರವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಕಳಡ್ಕ ಸತ್ಯನಾರಾಯಣ ಭಜನಾ ಮಂದಿರದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ. ಅಭಿವೃದ್ಧಿಯ ವಿಚಾರದಲ್ಲಿ ಪಕ್ಷಭೇಧವಿಲ್ಲದೆ ಸಹಕಾರ ನೀಡಿದರೆ ರಾಜ್ಯದ ಮಾದರಿ ನಗರವಾಗುವುದರಲ್ಲಿ‌ ಸಂದೇಹವಿಲ್ಲ ಎಂದು ಹೇಳಿದ್ದಾರೆ.‌

ಈ‌ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಶೋಭಾ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಬಿ.ರಾಮಚಂದ್ರ ಆಳ್ವ, ರವೀಂದ್ರ ಸೇಮಿತ,, ಭರತ್‌ರಾಜ್ ಶೆಟ್ಟಿ, ಸುದರ್ಶನ್,ಸದಾಶಿವ ದಾಸ್ ಕೆ. ರಮೇಶ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಬಜಾಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಅಧ್ಯಕ್ಷ ಜಯ.ಕೆ ಬಜಾಲ್ ಪ್ರಸ್ತಾಪಿಸಿದರು.ಉಪಾಧ್ಯಕ್ಷ ನಾಗೇಶ್ ಶೆಟ್ಟಿ ಬಜಾಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಸಾಲ್ಯಾಯನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು