8:33 PM Saturday31 - January 2026
ಬ್ರೇಕಿಂಗ್ ನ್ಯೂಸ್
ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ

ಇತ್ತೀಚಿನ ಸುದ್ದಿ

6.98 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಂಕುಸ್ಥಾಪನೆ

07/09/2022, 23:29

ಮಂಗಳೂರು(reporterkarnataka.com): ಮಂಗಳೂರಿನ ಅಭಿವೃಧ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿವೆ ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು.

ಅವರು ಬುಧವಾರ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ 56ನೇ ಮಂಗಳದೇವಿ ವಾರ್ಡಿನಲ್ಲಿ ಮಂಗಳಾ ದೇವಿ ಬಸ್ ಟರ್ಮಿನಲ್, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ನಗರ ಪಾಲಿಕೆ ಸಿಬ್ಬಂದಿಗಳಿಗೆ ನೂತನ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ನಗರವಾಗಿರುವ ಮಂಗಳೂರಿನ ಅಭಿವೃದ್ದಿಗೆ ಸರ್ಕಾರಗಳು ಬದ್ದವಾಗಿವೆ. ಈ ದಿಸೆಯಲ್ಲಿ ನಗರಕ್ಕೆ ಅಗತ್ಯವಿರುವ ಸಾಕಷ್ಟು ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನ ಮಾಡಲಾಗುತ್ತಿದೆ, ಮಂಗಳಾದೇವಿ ದೇವಸ್ಥಾನದ ಮುಖ್ಯರಸ್ತೆ ಬದಿಯಲ್ಲಿ ಬಸ್‍ಗಳು ನಿಲ್ಲುವುದರಿಂದ ಓಡಾಡುವ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ನಗರಪಾಲಿಕೆ ಸಿಬ್ಬಂದಿಗಳ ವಸತಿಗೃಹ ಹಳೆಯದಾಗಿದ್ದು ವಾಸಿಸಲು ಕಷ್ಟವಾಗುತ್ತದೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ವೈದ್ಯ ಚಿಕಿತ್ಸಾಲಯಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಆದ್ದರಿಂದ 4. 98 ಕೋಟಿ ರೂ.ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ಬಸ್ ಟರ್ಮಿನಲ್ ಮತ್ತು 2 ಕೋಟಿ ರೂ.ಗಳಲ್ಲಿ ನಗರ ಪಾಲಿಕೆ ಸಿಬ್ಬಂದಿಗಳ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದವರು ಹೇಳಿದರು.


ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್, ಮುಖಂಡರಾದ ರವಿಶಂಕರ್ ಮೀಜಾರು, ನಿತಿನ್ ಕುಮಾರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು