9:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಕನ್ಯಾಕುಮಾರಿ ಟು ಕಾಶ್ಮೀರ: ಕಾಂಗ್ರೆಸ್ ‘ಭಾರತ್ ಜೋಡೋ’ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ

08/09/2022, 19:06

ಚೆನ್ನೈ(reporterkarnataka.com): ಮುಂಬರುವ ಸಂಸತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಬೃಹತ್ ಜನಸಂಪರ್ಕ ಕಾರ್ಯಕ್ರಮ ‘ಭಾರತ್ ಜೋಡೋ ಯಾತ್ರೆ’ಗೆ ಗುರುವಾರ ಕನ್ಯಾಕುಮಾರಿಯಿಂದ ಚಾಲನೆ ನೀಡಿದರು. 150 ದಿನಗಳಲ್ಲಿ 3,500 ಕಿ.ಮೀ ದೂರ ಪಾದಯಾತ್ರೆ ಸಾಗಲಿದೆ.


ಯಾತ್ರೆಯ ಇಂದಿನ ಪ್ರಮುಖ ಅಂಶಗಳು

*ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ರಾಹುಲ್ ಗಾಂಧಿ ತಮ್ಮ ಯಾತ್ರೆ ಪ್ರಾರಂಭಿಸಿದರು.

* ನಂತರ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ವಿಭಜನೆಯ ರಾಜಕೀಯದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಆದರೆ ಇದಕ್ಕಾಗಿ ನಾನು ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳುವುದಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ, ಭರವಸೆಯು ಭಯವನ್ನು ಸೋಲಿಸುತ್ತದೆ, ನಾವು ಒಟ್ಟಾಗಿ ಜಯಿಸುತ್ತೇವೆ ಎಂದು ಹೇಳಿದರು.

* ಬಿಜೆಪಿ ಆಡಳಿತದಡಿಯಲ್ಲಿ ಸಾಮಾಜಿಕ ಧ್ರುವೀಕರಣ ಮತ್ತು ರಾಜಕೀಯ ಕೇಂದ್ರೀಕರಣವನ್ನು ಆರೋಪಿಸಿದ ರಾಹುಲ್ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ ದೇಶವನ್ನು ಒಗ್ಗೂಡಿಸಲು ತನಗೆ ತಪಸ್ಸು ಇದ್ದಂತೆ ಎಂದು ಈ ಹಿಂದೆ ಹೇಳಿದರು

*  ಯಾವುದೇ ರಾಜಕೀಯ ದೃಷ್ಟಿಕೋನವನ್ನು ನಿರಾಕರಿಸಿದರು. ಯಾತ್ರೆಯು ದೇಶವನ್ನು ಒಂದುಗೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು