8:06 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಬೆಂಗಳೂರು: ದಾಖಲೆಗಳಿಲ್ಲದೆ 76 ಲಕ್ಷ ನಗದು, 3 ಮೊಬೈಲ್ ಸಿಸಿಬಿ ಪೋಲಿಸ್ ವಶಕ್ಕೆ; 3 ಮಂದಿ ಬಂಧನ

08/09/2022, 21:32

ಬೆಂಗಳೂರು(reporterkarnataka.com): ದಾಖಲೆ ಇಲ್ಲದ 76 ಲಕ್ಷ ರೂ.ವನ್ನು ವಶಪಡಿಸಿಕೊಂಡಿರುವ ಸಿಸಿಬಿ ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ.

ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್‍ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬಂಧಿತರು.

ಇದು ಹವಾಲ ಹಣವಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಲ್ಸನ್‍ಗಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿ ನಗರದ ನಂಜಪ್ಪ ರಸ್ತೆ, ನಿರ್ಮಲ ಇಂಗ್ಲೀಷ್ ಶಾಲೆಯ ಹತ್ತಿರ ಮೂವರು ಹಣವನ್ನಿಟ್ಟುಕೊಂಡು ಒಬ್ಬರಿಗೊಬ್ಬರು ಸನ್ನೆ ಮುಖಾಂತರ ಮಾತನಾಡಿಕೊಂಡು ಯಾರನ್ನೂ ಕಾಯುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ಮೂವರನ್ನು ಬಂಧಿಸಿ ಅವರ ಬಳಿ ಇದ್ದ 76 ಲಕ್ಷ ರೂ. ಹಣ ಹಾಗೂ ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಿಸಿಬಿ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು