7:01 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: ದಾಖಲೆಗಳಿಲ್ಲದೆ 76 ಲಕ್ಷ ನಗದು, 3 ಮೊಬೈಲ್ ಸಿಸಿಬಿ ಪೋಲಿಸ್ ವಶಕ್ಕೆ; 3 ಮಂದಿ ಬಂಧನ

08/09/2022, 21:32

ಬೆಂಗಳೂರು(reporterkarnataka.com): ದಾಖಲೆ ಇಲ್ಲದ 76 ಲಕ್ಷ ರೂ.ವನ್ನು ವಶಪಡಿಸಿಕೊಂಡಿರುವ ಸಿಸಿಬಿ ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ.

ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್‍ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬಂಧಿತರು.

ಇದು ಹವಾಲ ಹಣವಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಲ್ಸನ್‍ಗಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿ ನಗರದ ನಂಜಪ್ಪ ರಸ್ತೆ, ನಿರ್ಮಲ ಇಂಗ್ಲೀಷ್ ಶಾಲೆಯ ಹತ್ತಿರ ಮೂವರು ಹಣವನ್ನಿಟ್ಟುಕೊಂಡು ಒಬ್ಬರಿಗೊಬ್ಬರು ಸನ್ನೆ ಮುಖಾಂತರ ಮಾತನಾಡಿಕೊಂಡು ಯಾರನ್ನೂ ಕಾಯುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ಮೂವರನ್ನು ಬಂಧಿಸಿ ಅವರ ಬಳಿ ಇದ್ದ 76 ಲಕ್ಷ ರೂ. ಹಣ ಹಾಗೂ ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಿಸಿಬಿ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು