10:23 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಕಾಂತಾವರ: ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವ

09/09/2022, 13:16

ಕಾಂತಾವರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾದ ವತಿಯಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರೂವಾರಿಯಾದ ಸೂತ್ತೂರು ಬ್ರಹ್ನಮಠದ ಲಿಂಗೈಕ್ಯ ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೆಯ ಜಯಂತಿ ಮಹೋತ್ಸವ ಆಚರಿಸಲಾಯಿತು. 

ದಕ್ಷಿಣ ಕನ್ನಡ ಜಿಲ್ಲೆಯ “ಕದಳಿ ಮಹಿಳಾ ವೇದಿಕೆ”ಯ ಅಧ್ಯಕ್ಷರಾದ ಸುರೇಖಾ ಯಾಳವಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 12ನೆಯ ಶತಮಾನದ ಬಸವಾದಿ ಶರಣರ “ಅನುಭವ ಮಂಟಪ”ವು ವರ್ಗ ಭೇದ, ವರ್ಣಭೇದಗಳನ್ನು ತೊಡೆದು ಸಮಾನತೆಯ ಬೀಜ ಬಿತ್ತಿತ್ತು. ಪ್ರಸ್ತುತ ಸಮಾಜದ ಸಂಘರ್ಷಗಳು ನಾಡಿನ ಸಂಸ್ಕೃತಿಯನ್ನು ಹಾಳುಗೆಡಹುತ್ತೀವೆ. ಸಮಾಜದ ಉನ್ನತಿಗೆ ಪೂರಕವಾದ ಬಸವ ತತ್ವಗಳನ್ನು ಪ್ರಚಾರಗೊಳಿಸಿ ಸಮಾಜದಲ್ಲಿ ಸಹಬಾಳ್ವೆಯ ಜೀವನಕ್ಕೆ ಸಂಘಗಳು ಕಾರ್ಯನಿರ್ವಹಿಸಬೇಕೆಂದರು. 

ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತನ ಇಸ್ಮತ್ ಜಹಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಎಲ್ಲ ಧರ್ಮ ಮಂತ್ರ ಒಂದೇ ಸಮಾನತೆ. ಜನರ ಜೀವನಶೈಲಿ ನೈಸರ್ಗಿಕವಾಗಿಲ್ಲದ ಕಾರಣ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ನಮ್ಮ  ಸ್ವಾಸ್ಥ್ಯವನ್ನು ಕಾಪಾಡಿಕೂಳ್ಳುವುರೊಂದಿಗೆ ಸಮಾಜದ ಹಿತ ಕಾಪಾಡಬೇಕೆಂದರು. 


ಉಪನ್ಯಾಸ ನೀಡಲು ಬಂದಿದ್ದ ಸುಜೀರು ಶಾಲೆಯ ಮುಖ್ಯ ಶಿಕ್ಷಕಿ ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ತಿಳಿಸುತ್ತಾ ಈಗಿನ ಯುವ ಪೀಳಿಗೆ ಶರಣ ತತ್ವಗಳನ್ನು ಅನುಸರಿಸಬೇಕು. ಅವಿಭಕ್ತ ಕೂಡು ಕುಟುಂಬದಲ್ಲಿ ಭದ್ರತೆಯಿಂದ ಸಮಾಜಮುಖಿ ಜೀವನ ನಡೆಸಬೇಕಂದರು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ವಚನ ಚಿಂತನೆ, ಗಾದೆಮಾತು, ಒಗಟು, ಒಡಪು, ರಸಪ್ರಸ್ನೆ, ಇತ್ಯಾದಿ ಸಾಂಸ್ಕೃತಿಕ ಚಟುವಟಿಕೆಗಳು ಸಾಂಗವಾಗಿ ನೆರವೇರಿದವು. ನಂತರ ಮಹಾಪ್ರಸಾದದೊಂದಿಗೆ ಕಾರ್ಯಕ್ರಮವು ಮಂಗಲಗೊಂಡು ಸಂಪನ್ನಗೊಂಡಿತ್ತು,

ಇತ್ತೀಚಿನ ಸುದ್ದಿ

ಜಾಹೀರಾತು