4:06 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕಾಂತಾವರ: ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವ

09/09/2022, 13:16

ಕಾಂತಾವರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾದ ವತಿಯಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರೂವಾರಿಯಾದ ಸೂತ್ತೂರು ಬ್ರಹ್ನಮಠದ ಲಿಂಗೈಕ್ಯ ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೆಯ ಜಯಂತಿ ಮಹೋತ್ಸವ ಆಚರಿಸಲಾಯಿತು. 

ದಕ್ಷಿಣ ಕನ್ನಡ ಜಿಲ್ಲೆಯ “ಕದಳಿ ಮಹಿಳಾ ವೇದಿಕೆ”ಯ ಅಧ್ಯಕ್ಷರಾದ ಸುರೇಖಾ ಯಾಳವಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 12ನೆಯ ಶತಮಾನದ ಬಸವಾದಿ ಶರಣರ “ಅನುಭವ ಮಂಟಪ”ವು ವರ್ಗ ಭೇದ, ವರ್ಣಭೇದಗಳನ್ನು ತೊಡೆದು ಸಮಾನತೆಯ ಬೀಜ ಬಿತ್ತಿತ್ತು. ಪ್ರಸ್ತುತ ಸಮಾಜದ ಸಂಘರ್ಷಗಳು ನಾಡಿನ ಸಂಸ್ಕೃತಿಯನ್ನು ಹಾಳುಗೆಡಹುತ್ತೀವೆ. ಸಮಾಜದ ಉನ್ನತಿಗೆ ಪೂರಕವಾದ ಬಸವ ತತ್ವಗಳನ್ನು ಪ್ರಚಾರಗೊಳಿಸಿ ಸಮಾಜದಲ್ಲಿ ಸಹಬಾಳ್ವೆಯ ಜೀವನಕ್ಕೆ ಸಂಘಗಳು ಕಾರ್ಯನಿರ್ವಹಿಸಬೇಕೆಂದರು. 

ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತನ ಇಸ್ಮತ್ ಜಹಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಎಲ್ಲ ಧರ್ಮ ಮಂತ್ರ ಒಂದೇ ಸಮಾನತೆ. ಜನರ ಜೀವನಶೈಲಿ ನೈಸರ್ಗಿಕವಾಗಿಲ್ಲದ ಕಾರಣ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ನಮ್ಮ  ಸ್ವಾಸ್ಥ್ಯವನ್ನು ಕಾಪಾಡಿಕೂಳ್ಳುವುರೊಂದಿಗೆ ಸಮಾಜದ ಹಿತ ಕಾಪಾಡಬೇಕೆಂದರು. 


ಉಪನ್ಯಾಸ ನೀಡಲು ಬಂದಿದ್ದ ಸುಜೀರು ಶಾಲೆಯ ಮುಖ್ಯ ಶಿಕ್ಷಕಿ ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ತಿಳಿಸುತ್ತಾ ಈಗಿನ ಯುವ ಪೀಳಿಗೆ ಶರಣ ತತ್ವಗಳನ್ನು ಅನುಸರಿಸಬೇಕು. ಅವಿಭಕ್ತ ಕೂಡು ಕುಟುಂಬದಲ್ಲಿ ಭದ್ರತೆಯಿಂದ ಸಮಾಜಮುಖಿ ಜೀವನ ನಡೆಸಬೇಕಂದರು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ವಚನ ಚಿಂತನೆ, ಗಾದೆಮಾತು, ಒಗಟು, ಒಡಪು, ರಸಪ್ರಸ್ನೆ, ಇತ್ಯಾದಿ ಸಾಂಸ್ಕೃತಿಕ ಚಟುವಟಿಕೆಗಳು ಸಾಂಗವಾಗಿ ನೆರವೇರಿದವು. ನಂತರ ಮಹಾಪ್ರಸಾದದೊಂದಿಗೆ ಕಾರ್ಯಕ್ರಮವು ಮಂಗಲಗೊಂಡು ಸಂಪನ್ನಗೊಂಡಿತ್ತು,

ಇತ್ತೀಚಿನ ಸುದ್ದಿ

ಜಾಹೀರಾತು