12:46 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮುಚ್ಚೂರು: ಗ್ರಾಮ ಸ್ನೇಹಿ ಕಾರ್ಯಕ್ರಮ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ; ಮನೆ, ಆರೋಗ್ಯ ಕಾರ್ಡ್, ವೃದ್ಧಾಪ್ಯ ವೇತನ ವಿತರಣೆ

09/09/2022, 19:13

ಸುರತ್ಕಲ್(reporterkarnataka.com): ಗ್ರಾಮ ಪಂಚಾಯತ್ ಮುಚ್ಚೂರು, ಲಯನ್ಸ್ ಕ್ಲಬ್ ಮುಚ್ಚೂರು, ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ, ಪ್ರಗತಿ ಯುವಕ ಮಂಡಲ ಮುಚ್ಚೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಮ ಸ್ನೇಹಿ ಕಾರ್ಯಕ್ರಮವನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ 169 ಕಟ್ಟಡ ಕಾರ್ಮಿಕರ ನೋಂದಾವಣಿ ಮತ್ತು ನವೀಕರಣ, 69 ಜಾತಿ ಮತ್ತು ಆದಾಯ ಪ್ರಮಾಣಪತ್ರ, 171ಆರೋಗ್ಯ ಕಾರ್ಡ್, 3 ಜನರಿಗೆ ವೃದ್ಧಾಪ್ಯ ವೇತನ, 34 ಪರಿಶಿಷ್ಟ ಪಂಗಡದವರಿಗೆ ನೀರಿನ ಟ್ಯಾಂಕ್, ಬಸವ ವಸತಿ ಯೋಜನೆಯಡಿಯಲ್ಲಿ 10 ಮನೆ ವಿತರಣೆ ಮತ್ತು‌ 2 ಮನೆಗಳಿಗೆ ನೆರೆ ಪರಿಹಾರದ ಚೆಕ್ ಅನ್ನು 
ಡಾ.ಭರತ್ ಶೆಟ್ಟಿ ವಿತರಿಸಿದರು.

ವೇದಿಕೆಯಲ್ಲಿ ಜಿಪಂ ಮಾಜಿ ಸದಸ್ಯರಾದ ಜನಾರ್ದನ ಗೌಡ, ಗ್ರಾಪಂ ಅಧ್ಯಕ್ಷರಾದ ಮೋಹಿನಿ, ಉಪಾಧ್ಯಕ್ಷರಾದ ನಾರಾಯಣ, ಎ ಎಸ್ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸ್ಟ್ಯಾನಿ ಪಿಂಟೋ, ಲಯನ್ಸ್ ಕ್ಲಬ್ ಸದಸ್ಯರಾದ ಮುಕ್ತಾನಂದ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ವೀರಪ್ಪ ಗೌಡ, ಸುಮನಾ, ಪೂರ್ಣಿಮಾ, ರಾಜೇಂದ್ರ ಪಿಂಟೋ, ಪಿಡಿಒ ಜಲಜಾ, ಕಾರ್ಯದರ್ಶಿ ಸತೀಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು