1:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಭಗವದ್ಗೀತೆ ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ: ಸಂಸದ ಗೋಪಾಲ್ ಶೆಟ್ಟಿ ಪ್ರಸ್ತಾವನೆ

09/09/2022, 20:03

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಆ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರ ಈ ಕಾರ್ಯವನ್ನು ಅನುಷ್ಠಾನಗೊಳಿಸುವ ಯೋಚನೆಯಲ್ಲಿದೆ.

ಜುಲೈ 5 ರಂದು ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದಿದ್ದು, ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವಂತೆ ಗೃಹ ಸಚಿವರನ್ನು ಒತ್ತಾಯಿಸಿದ್ದರು. ಗೃಹ ಸಚಿವ ಶಾ ಅವರು ಜುಲೈ 18 ರಂದು ಈ ಪತ್ರಕ್ಕೆ ಉತ್ತರ ಕಳುಹಿಸಿದ್ದು, ತಮ್ಮ ಪತ್ರವನ್ನು ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಸಚಿವಾಲಯಗಳಿಗೆ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವಾಲಯವು ಈ ವಿಷಯದಲ್ಲಿ ಶಿಕ್ಷಣ ಸಚಿವಾಲಯದ ಅಭಿಪ್ರಾಯವನ್ನು ಕೇಳಿದೆ. ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವ ಬಗ್ಗೆ ಶಿಕ್ಷಣ ಸಚಿವಾಲಯವು ಆಗಸ್ಟ್ 10 ರಂದು ತನ್ನ ಹೇಳಿಕೆಗಳನ್ನು ಕಳುಹಿಸಿದೆ ಎನ್ನಲಾಗಿದೆ. ಇದರ ನಂತರ, ಗೃಹ ವ್ಯವಹಾರಗಳ ಸಚಿವಾಲಯವು ಈಗ ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಪುಸ್ತಕವಾಗಿ ಘೋಷಿಸುವ ಬಗ್ಗೆ ಸಂಸ್ಕೃತಿ ಸಚಿವಾಲಯದ ಅಭಿಪ್ರಾಯವನ್ನು ಕೇಳಿದ್ದು,ಅಲ್ಲಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂಬ ಮಾಹಿತಿ ದೊರಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು