9:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ರಾಹುಲ್ ಉಡುಗೆ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ಮಾತನಾಡಲಿ; ದಿನೇಶ್ ಗುಂಡೂರಾವ್ 

10/09/2022, 16:55

ಬೆಂಗಳೂರು(reporterkarnataka.com):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ , ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ. ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ. ಅದು  ಬಿಜೆಪಿ ಯವರ ಕಣ್ಣಿಗೆ ಕಾಣುವುದಿಲ್ಲವೆ..? ‘ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಮಾಜಿ ಅಧ್ಯಕ್ಷ  ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ಈ ಕುರತು ಟ್ವೀಟ್ ಮಾಡಿರುವ ಅವರು,‘ಬಿಜೆಪಿ ಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ.?’ ಎಂದು ಕಿಡಿಕಾರಿದ್ದಾರೆ.

‘ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿ ಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಬಿಜೆಪಿ ಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆತು ನಾರುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ.? ಎಂದು ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು