3:05 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ರಾಹುಲ್ ಉಡುಗೆ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ಮಾತನಾಡಲಿ; ದಿನೇಶ್ ಗುಂಡೂರಾವ್ 

10/09/2022, 16:55

ಬೆಂಗಳೂರು(reporterkarnataka.com):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ , ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ. ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ. ಅದು  ಬಿಜೆಪಿ ಯವರ ಕಣ್ಣಿಗೆ ಕಾಣುವುದಿಲ್ಲವೆ..? ‘ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಮಾಜಿ ಅಧ್ಯಕ್ಷ  ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ಈ ಕುರತು ಟ್ವೀಟ್ ಮಾಡಿರುವ ಅವರು,‘ಬಿಜೆಪಿ ಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ.?’ ಎಂದು ಕಿಡಿಕಾರಿದ್ದಾರೆ.

‘ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿ ಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಬಿಜೆಪಿ ಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆತು ನಾರುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ.? ಎಂದು ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು