11:21 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಖಡಕ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ. ಮಹೇಶ್ ಮಾನನಷ್ಟ ಮೊಕದ್ದಮೆ

11/09/2022, 16:26

ಬೆಂಗಳೂರು(reporterkarnataka.com):ಭೂ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸಾ.ರಾ. ಮಹೇಶ್ ಅವರು ಖಡಕ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾದ ರೋಹಿಣಿ ಸಿಂಧೂರಿ ವಿರುದ್ಧ ಮಾನ ನಷ್ಟ ಮೊಕದ್ದವೆ ಹೂಡುವ ಸಂಬಂಧ ಲೀಗಲ್ ನೋಟಿಸ್ ನೀಡಿದ್ದಾರೆ.

ಸಾ.ರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ವಿಚಾರವಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು.ಈ  ವಿಚಾರವಾಗಿ ಸಾ.ರಾ ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಈ ಹಿನ್ನಲೆ ರೋಹಿಣಿ ಸಿಂಧೂರಿ ಯವರಿಗೆ ಲೀಗಲ್ ನೋಟಿಸ್ ಅನ್ನು ಕೂಡ ಜಾರಿಗೊಳಿಸಲಾಗಿದ್ದು, ಅಧಿಕಾರಿ ಇದಕ್ಕೆ ಉತ್ತರ ಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿದ ಶಾಸಕ ಸಾ.ರಾ ಮಹೇಶ್ ಹಿಂದಿನ ಜಿಲ್ಲಾಧಿಕಾರಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಸರಕಾರಿ ಹಣ ದುರ್ವಿನಿಯೋಗವಾಗಿದೆ, ಕೋವಿಡ್ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡದೆ ಬೇಜವಾಬ್ದಾರಿಯಿಂದ ವರ್ತನೆ ಮಾಡಿದ್ದಾರೆ. ಈ ಬಗ್ಗೆ ಚೀಫ್ ಸೆಕ್ರೆಟರಿ ವರದಿ ಬಂದ ನಂತರ ವರ್ಗಾವಣೆ ಮಾಡಿದ್ದು, ಆದರೆ ಅದೇ ಕಾರಣಕ್ಕೆ ನನ್ನ ವಿರುದ್ಧ ಭೂಹಗರಣದ ಆರೋಪ ಮಾಡಲಾಗಿದೆ. ಭೂ ಅಕ್ರಮದ ಕಾರಣಕ್ಕೆ ವರ್ಗಾವಣೆಯಾಗಿದೆ ಎಂದು ಬಿಂಬಿಸಿದ್ದಾರೆ. ಆ ಸಮಯದಲ್ಲಿ ನಾನು ಮಾನನಷ್ಟ ಮೊಕದ್ದಮೆ ಹಾಕುವುದಾಗಿ ತಿಳಿಸಿದ್ದೆ. ಅದರಂತೆ ಮೈಸೂರಿನ ನ್ಯಾಯಾಲಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಹೂಡಿದ್ದೇನೆ ಎಂದು ಮೈಸೂರಿನಲ್ಲಿ ಶಾಸಕ ಸಾರಾ ಮಹೇಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು