11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ದಸರಾ ರಜೆ: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಜತೆ ಶಾಸಕ ವೇದವ್ಯಾಸ ಕಾಮತ್ ಚರ್ಚೆ

12/09/2022, 17:22

ಮಂಗಳೂರು(reporterkarnataka.com): ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್, 26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಶಾಸಕರು ಮನವಿ ಮಾಡಿದ್ದೇನೆ. ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸೇರಿದಂತೆ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಹಬ್ಬಕ್ಕೆ ಪೂರಕವಾಗಿ ರಜೆ ನೀಡಲು ಮನವಿ ಮಾಡಿದ್ದೇನೆ.  ಸಚಿವರು ಕೂಡ ಪೂರಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿ ಆದೇಶ ಹೊರಡಿಸುವ ಭರವಸೆ ನೀಡಿದ್ದಾರೆ. 

ಅಕ್ಟೋಬರ್ 2ನೇ ತಾರೀಕು ಗಾಂಧಿ ಜಯಂತಿಯ ಕಾರಣ ಆ ದಿನ ಹೊರತುಪಡಿಸಿ ದಸರಾ ರಜೆ ನೀಡಲು ಚಿಂತನೆ ನಡೆಸಿರುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು