4:01 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ದಸರಾ ರಜೆ: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಜತೆ ಶಾಸಕ ವೇದವ್ಯಾಸ ಕಾಮತ್ ಚರ್ಚೆ

12/09/2022, 17:22

ಮಂಗಳೂರು(reporterkarnataka.com): ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್, 26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಶಾಸಕರು ಮನವಿ ಮಾಡಿದ್ದೇನೆ. ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸೇರಿದಂತೆ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಹಬ್ಬಕ್ಕೆ ಪೂರಕವಾಗಿ ರಜೆ ನೀಡಲು ಮನವಿ ಮಾಡಿದ್ದೇನೆ.  ಸಚಿವರು ಕೂಡ ಪೂರಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿ ಆದೇಶ ಹೊರಡಿಸುವ ಭರವಸೆ ನೀಡಿದ್ದಾರೆ. 

ಅಕ್ಟೋಬರ್ 2ನೇ ತಾರೀಕು ಗಾಂಧಿ ಜಯಂತಿಯ ಕಾರಣ ಆ ದಿನ ಹೊರತುಪಡಿಸಿ ದಸರಾ ರಜೆ ನೀಡಲು ಚಿಂತನೆ ನಡೆಸಿರುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು