1:10 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ;  ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು?

14/09/2022, 13:46

ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್​​ಪಿನ್​ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇದೆಲ್ಲ ನಡೆದದ್ದು ಮಧ್ಯಪ್ರದೇಶದ ರಾಯ್ಪುರದಲ್ಲಿ.

ಹೋಟೆಲ್​​​ನಲ್ಲಿ ಈ ಅಕ್ರಮ ದಂಧೆ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ.

11 ಯುವತಿಯರು, ಓರ್ವ ಕಿಂಗ್​ಪಿನ್​ ಬಂಧನ:

ರಾಯ್ಪುರ್​​ದ ಪ್ರಮುಖ ಫೋರ್​​​ಸ್ಟಾರ್​​ ಹೋಟೆಲ್​​ನಲ್ಲಿ ಹೈ-ಪ್ರೊಫೈಲ್​ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗ್ತಿತ್ತು. ಇಂದು ಬೆಳಗ್ಗೆ ಪೊಲೀಸರು ದಿಢೀರ್​ ದಾಳಿ ನಡೆಸಿದ್ದು, ಈ ವೇಳೆ ಬೆಂಗಳೂರಿನ ಓರ್ವ ಯುವತಿ ಸೇರಿದಂತೆ 11 ಹುಡುಗಿಯರು ಹಾಗೂ ಓರ್ವ ಕಿಂಗ್​ ಪಿನ್​ ಬಲೆಗೆ ಬಿದ್ದಿದ್ದಾರೆ.

ಬಂಧಿತ ಯುವತಿಯರು ಮೂಲತಃ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮತ್ತು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಇವರೆಲ್ಲರೂ ಸೆಕ್ಸ್ ರಾಕೆಟ್ ದಂಧೆಗೆ ಇಳಿದಿದ್ದರು. ಬಂಧಿತ ಹುಡುಗಿಯರ ಮೊಬೈಲ್​ ಫೋನ್​​ಗಳಲ್ಲಿನ ಚಾಟ್ ಸಂದೇಶ ಚೆಕ್​ ಮಾಡಿರುವ ಪೊಲೀಸರಿಗೆ ಶಾಕ್ ಆಗಿದ್ದು, ಇದರಲ್ಲಿ ಕೆಲ ರಾಜಕೀಯ ನಾಯಕರ ಹೆಸರು ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಅವರ ಹೆಸರು ಬಹಿರಂಗಪಡಿಸಿಲ್ಲ.

ರಾಜಕೀಯ ನಾಯಕರ ನಂಟು: ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿರುವ ಯುವತಿಯರು ಅನೇಕ ರಾಜಕೀಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದು, ಅವರು ಬಳಕೆ ಮಾಡ್ತಿದ್ದ ಮೊಬೈಲ್​ ಫೋನ್​​ಗಳಿಂದ ಈ ಮಹತ್ವದ ಮಾಹಿತಿ ಹೊರಬಿದ್ದಿದೆ. ಆದರೆ, ಯಾವೆಲ್ಲ ರಾಜಕೀಯ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಹೊರಹಾಕಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು