7:54 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು