9:03 PM Sunday19 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು