11:51 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು