7:58 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಒಟಿಟಿ ಫಿನಾಲೆ: ವಿಜೇತರನ್ನು ಊಹಿಸಿದ ಮಾಜಿ ಸ್ಪರ್ಧಿಗಳು

14/09/2022, 19:01

ಬೆಂಗಳೂರು(reporterkarnataka.com): ಬಿಗ್ ಬಾಸ್ ಕನ್ನಡದ ಮೊದಲ OTT ಸೀಸನ್ ತನ್ನ ಮಹತ್ವದ ಪ್ರಯಾಣದ ಅಂತಿಮ ಹಂತದಲ್ಲಿದೆ. ರೋಮಾಂಚನಕಾರಿ ಫೈನಲ್‌ ವೀಕ್ಷಿಸಲು ಪ್ರೇಕ್ಷಕರು ಸಜ್ಜಾಗುತ್ತಿದ್ದಂತೆ, ಪ್ರದರ್ಶನದ ಈ ಮೊದಲಿನ ಕೆಲವು ಸ್ಪರ್ಧಿಗಳು ಈ ಕಾರ್ಯಕ್ರಮದ ಸಿಂಹಾವಲೋಕನ ಮಾಡಿದ್ದಾರೆ ಮತ್ತು ಒಟ್ಟಾರೆ ಪಯಣದ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಯಾರು ಈ ಶೋ ಗೆದ್ದು ಟ್ರೋಫಿಯನ್ನು ಮನೆಗೊಯ್ಯುತ್ತಾರೆಂದೂ ಊಹಿಸಿದ್ದಾರೆ!

ಸೋಮಣ್ಣ ಅವರು ಸ್ವತಂತ್ರವಾಗಿ ಆಡುತ್ತಿರುವುದರಿಂದ ಮತ್ತು ಉತ್ತಮ ಕೆಲಸ ಮಾಡುತ್ತಿರುವುದರಿಂದ ಅವರ ಗೆಲುವಿಗೆ ಅಪಾರ ಅವಕಾಶವಿದೆ ಎಂದು ಇತ್ತೀಚೆಗೆ ಎಲಿಮಿನೇಟ್ ಆಗಿರುವ ನಟಿ ಮತ್ತು ನಿರ್ಮಾಪಕಿ ಚಿತ್ರಾ ಹಳ್ಳಿಕೇರಿ ಭಾವಿಸುತ್ತಾರೆ. 

ಮನೆಯಲ್ಲಿ ಯಾರಿಗೆ ಉತ್ತಮ ತಂತ್ರವಿದೆ ಎಂದು ಕೇಳಿದಾಗ, ಚಿತ್ರಾ ಹೇಳಿದ್ದಿಷ್ಟು: “ನಾವು ತಂತ್ರದ ಬಗ್ಗೆ ಮಾತನಾಡುವಾಗ, ರಾಕೇಶ್ ಅವರು ಇಡೀ ಶೋದಲ್ಲಿ ಸ್ಥಿರವಾಗಿ ಉಳಿದಿದ್ದಾರೆ ಮತ್ತು ನನ್ನ ಪ್ರಕಾರ ಅದೇ ಅವರ ದೊಡ್ಡ ಶಕ್ತಿಯಾಗಿದೆ.”

ತಮ್ಮ ಪ್ರಯಾಣವನ್ನು ನೆನಪಿಸಿಕೊಂಡ ಚೈತ್ರ , “ಬಿಗ್ ಬಾಸ್ OTT ಕನ್ನಡ ಸೀಸನ್ 1 ಜೀವನದ ಪ್ರತಿಯೊಂದು ಹಂತದ ಜನರ ಜೊತೆಗೆ ಬೆರೆಯಲು ಅವಕಾಶ ನೀಡಿದ್ದು, ಅದ್ಭುತ ಅನುಭವವಾಗಿದೆ” ಎಂದರು.

ಬಿಗ್ ಬಾಸ್ ಮನೆಯಿಂದ ಹೊರಬಿದ್ದವರಲ್ಲಿ ಮೊದಲಿಗರಾದ ರೂಪದರ್ಶಿ ಮತ್ತು ನಟಿ ಕಿರಣ್ ಯೋಗೇಶ್ವರ್ ಹೇಳಿದರು, “ರಾಕೇಶ್ ಪ್ರಬಲ ಸ್ಪರ್ಧಿಗಳಲ್ಲಿ ಒಬ್ಬರು. ಏಕೆಂದರೆ, ಅವರು ತುಂಬಾ ಸ್ಮಾರ್ಟ್ ಮತ್ತು ತಮ್ಮ ಆಟದಲ್ಲಿ ಚೆನ್ನಾಗಿದ್ದಾರೆ. ಸ್ಪರ್ಧೆಯ ವಿಷಯದಲ್ಲಿ, ತಂತ್ರ ಮತ್ತು ಪ್ರೇಕ್ಷಕರ ಮೇಲೆ ಸಾನಿಯಾ ಉತ್ತಮ ನಾಡಿಮಿಡಿತವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಅಕ್ಷತಾ ಕುಕಿ ಪ್ರತಿಕ್ರಿಯಿಸಿದ್ದು ಹೀಗೆ: “ರಾಕೇಶ್ ಅವರು ತುಂಬಾ ಅರ್ಹರು ಮತ್ತು ಆಟಕ್ಕೆ 100% ಕ್ಕಿಂತ ಹೆಚ್ಚು ನೀಡಿರುವುದರಿಂದ ಅವರು ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ, ಅವರು ಮನೆಯಲ್ಲಿ ಅತ್ಯಂತ ಅರ್ಹ ಅಭ್ಯರ್ಥಿ.”

BBK OTT ಕನ್ನಡ ಮನೆಯ ನಗುಮುಖದ ಹುಡುಗಿ, ಸ್ಪೂರ್ತಿ ಗೌಡ, “ರೂಪೇಶ್ ಗೆಲ್ಲಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ, ಅವರು ಪ್ರಬಲ ಸ್ಪರ್ಧಿಯಾಗಿದ್ದು, ಒಳ್ಳೆಯ ಮನುಷ್ಯನೂ ಆಗಿದ್ದಾರೆ. ರಾಕೇಶ್ ಅವರು ಟಿ ತಂತ್ರದೊಂದಿಗೆ ತಮ್ಮ ಆಟವನ್ನು ಬಹಳ ಚುರುಕಾಗಿ ಆಡುತ್ತಿರುವುದರಿಂದ ವಿಜೇತರಾಗಬೇಕೆಂದು ನಾನು ಹಾರೈಸುತ್ತೇನೆ” ಎಂದು ಹೇಳಿದರು.

ವಿಜೇತರ ಕುರಿತು ಸ್ಪರ್ಧಿಗಳು ತಮ್ಮ ಭವಿಷ್ಯ ನುಡಿದಿದ್ದಾರೆ. ಬಿಗ್ ಬಾಸ್ OTT ಕನ್ನಡದ ಮೊದಲ ಸೀಸನ್‌ನ ಯಾರು ಗೆಲ್ಲುತ್ತಾರೆಂದು ನೀವು ಭಾವಿಸುತ್ತೀರಿ? ತಿಳಿದುಕೊಳ್ಳಲು @voot ಗೆ ಟ್ಯೂನ್ ಮಾಡಿ!

ಇತ್ತೀಚಿನ ಸುದ್ದಿ

ಜಾಹೀರಾತು