11:42 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಒಟಿಟಿ ಫಿನಾಲೆ: ವಿಜೇತರನ್ನು ಊಹಿಸಿದ ಮಾಜಿ ಸ್ಪರ್ಧಿಗಳು

14/09/2022, 19:01

ಬೆಂಗಳೂರು(reporterkarnataka.com): ಬಿಗ್ ಬಾಸ್ ಕನ್ನಡದ ಮೊದಲ OTT ಸೀಸನ್ ತನ್ನ ಮಹತ್ವದ ಪ್ರಯಾಣದ ಅಂತಿಮ ಹಂತದಲ್ಲಿದೆ. ರೋಮಾಂಚನಕಾರಿ ಫೈನಲ್‌ ವೀಕ್ಷಿಸಲು ಪ್ರೇಕ್ಷಕರು ಸಜ್ಜಾಗುತ್ತಿದ್ದಂತೆ, ಪ್ರದರ್ಶನದ ಈ ಮೊದಲಿನ ಕೆಲವು ಸ್ಪರ್ಧಿಗಳು ಈ ಕಾರ್ಯಕ್ರಮದ ಸಿಂಹಾವಲೋಕನ ಮಾಡಿದ್ದಾರೆ ಮತ್ತು ಒಟ್ಟಾರೆ ಪಯಣದ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಯಾರು ಈ ಶೋ ಗೆದ್ದು ಟ್ರೋಫಿಯನ್ನು ಮನೆಗೊಯ್ಯುತ್ತಾರೆಂದೂ ಊಹಿಸಿದ್ದಾರೆ!

ಸೋಮಣ್ಣ ಅವರು ಸ್ವತಂತ್ರವಾಗಿ ಆಡುತ್ತಿರುವುದರಿಂದ ಮತ್ತು ಉತ್ತಮ ಕೆಲಸ ಮಾಡುತ್ತಿರುವುದರಿಂದ ಅವರ ಗೆಲುವಿಗೆ ಅಪಾರ ಅವಕಾಶವಿದೆ ಎಂದು ಇತ್ತೀಚೆಗೆ ಎಲಿಮಿನೇಟ್ ಆಗಿರುವ ನಟಿ ಮತ್ತು ನಿರ್ಮಾಪಕಿ ಚಿತ್ರಾ ಹಳ್ಳಿಕೇರಿ ಭಾವಿಸುತ್ತಾರೆ. 

ಮನೆಯಲ್ಲಿ ಯಾರಿಗೆ ಉತ್ತಮ ತಂತ್ರವಿದೆ ಎಂದು ಕೇಳಿದಾಗ, ಚಿತ್ರಾ ಹೇಳಿದ್ದಿಷ್ಟು: “ನಾವು ತಂತ್ರದ ಬಗ್ಗೆ ಮಾತನಾಡುವಾಗ, ರಾಕೇಶ್ ಅವರು ಇಡೀ ಶೋದಲ್ಲಿ ಸ್ಥಿರವಾಗಿ ಉಳಿದಿದ್ದಾರೆ ಮತ್ತು ನನ್ನ ಪ್ರಕಾರ ಅದೇ ಅವರ ದೊಡ್ಡ ಶಕ್ತಿಯಾಗಿದೆ.”

ತಮ್ಮ ಪ್ರಯಾಣವನ್ನು ನೆನಪಿಸಿಕೊಂಡ ಚೈತ್ರ , “ಬಿಗ್ ಬಾಸ್ OTT ಕನ್ನಡ ಸೀಸನ್ 1 ಜೀವನದ ಪ್ರತಿಯೊಂದು ಹಂತದ ಜನರ ಜೊತೆಗೆ ಬೆರೆಯಲು ಅವಕಾಶ ನೀಡಿದ್ದು, ಅದ್ಭುತ ಅನುಭವವಾಗಿದೆ” ಎಂದರು.

ಬಿಗ್ ಬಾಸ್ ಮನೆಯಿಂದ ಹೊರಬಿದ್ದವರಲ್ಲಿ ಮೊದಲಿಗರಾದ ರೂಪದರ್ಶಿ ಮತ್ತು ನಟಿ ಕಿರಣ್ ಯೋಗೇಶ್ವರ್ ಹೇಳಿದರು, “ರಾಕೇಶ್ ಪ್ರಬಲ ಸ್ಪರ್ಧಿಗಳಲ್ಲಿ ಒಬ್ಬರು. ಏಕೆಂದರೆ, ಅವರು ತುಂಬಾ ಸ್ಮಾರ್ಟ್ ಮತ್ತು ತಮ್ಮ ಆಟದಲ್ಲಿ ಚೆನ್ನಾಗಿದ್ದಾರೆ. ಸ್ಪರ್ಧೆಯ ವಿಷಯದಲ್ಲಿ, ತಂತ್ರ ಮತ್ತು ಪ್ರೇಕ್ಷಕರ ಮೇಲೆ ಸಾನಿಯಾ ಉತ್ತಮ ನಾಡಿಮಿಡಿತವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಅಕ್ಷತಾ ಕುಕಿ ಪ್ರತಿಕ್ರಿಯಿಸಿದ್ದು ಹೀಗೆ: “ರಾಕೇಶ್ ಅವರು ತುಂಬಾ ಅರ್ಹರು ಮತ್ತು ಆಟಕ್ಕೆ 100% ಕ್ಕಿಂತ ಹೆಚ್ಚು ನೀಡಿರುವುದರಿಂದ ಅವರು ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ, ಅವರು ಮನೆಯಲ್ಲಿ ಅತ್ಯಂತ ಅರ್ಹ ಅಭ್ಯರ್ಥಿ.”

BBK OTT ಕನ್ನಡ ಮನೆಯ ನಗುಮುಖದ ಹುಡುಗಿ, ಸ್ಪೂರ್ತಿ ಗೌಡ, “ರೂಪೇಶ್ ಗೆಲ್ಲಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ, ಅವರು ಪ್ರಬಲ ಸ್ಪರ್ಧಿಯಾಗಿದ್ದು, ಒಳ್ಳೆಯ ಮನುಷ್ಯನೂ ಆಗಿದ್ದಾರೆ. ರಾಕೇಶ್ ಅವರು ಟಿ ತಂತ್ರದೊಂದಿಗೆ ತಮ್ಮ ಆಟವನ್ನು ಬಹಳ ಚುರುಕಾಗಿ ಆಡುತ್ತಿರುವುದರಿಂದ ವಿಜೇತರಾಗಬೇಕೆಂದು ನಾನು ಹಾರೈಸುತ್ತೇನೆ” ಎಂದು ಹೇಳಿದರು.

ವಿಜೇತರ ಕುರಿತು ಸ್ಪರ್ಧಿಗಳು ತಮ್ಮ ಭವಿಷ್ಯ ನುಡಿದಿದ್ದಾರೆ. ಬಿಗ್ ಬಾಸ್ OTT ಕನ್ನಡದ ಮೊದಲ ಸೀಸನ್‌ನ ಯಾರು ಗೆಲ್ಲುತ್ತಾರೆಂದು ನೀವು ಭಾವಿಸುತ್ತೀರಿ? ತಿಳಿದುಕೊಳ್ಳಲು @voot ಗೆ ಟ್ಯೂನ್ ಮಾಡಿ!

ಇತ್ತೀಚಿನ ಸುದ್ದಿ

ಜಾಹೀರಾತು