10:23 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಒಟಿಟಿ ಫಿನಾಲೆ: ವಿಜೇತರನ್ನು ಊಹಿಸಿದ ಮಾಜಿ ಸ್ಪರ್ಧಿಗಳು

14/09/2022, 19:01

ಬೆಂಗಳೂರು(reporterkarnataka.com): ಬಿಗ್ ಬಾಸ್ ಕನ್ನಡದ ಮೊದಲ OTT ಸೀಸನ್ ತನ್ನ ಮಹತ್ವದ ಪ್ರಯಾಣದ ಅಂತಿಮ ಹಂತದಲ್ಲಿದೆ. ರೋಮಾಂಚನಕಾರಿ ಫೈನಲ್‌ ವೀಕ್ಷಿಸಲು ಪ್ರೇಕ್ಷಕರು ಸಜ್ಜಾಗುತ್ತಿದ್ದಂತೆ, ಪ್ರದರ್ಶನದ ಈ ಮೊದಲಿನ ಕೆಲವು ಸ್ಪರ್ಧಿಗಳು ಈ ಕಾರ್ಯಕ್ರಮದ ಸಿಂಹಾವಲೋಕನ ಮಾಡಿದ್ದಾರೆ ಮತ್ತು ಒಟ್ಟಾರೆ ಪಯಣದ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಯಾರು ಈ ಶೋ ಗೆದ್ದು ಟ್ರೋಫಿಯನ್ನು ಮನೆಗೊಯ್ಯುತ್ತಾರೆಂದೂ ಊಹಿಸಿದ್ದಾರೆ!

ಸೋಮಣ್ಣ ಅವರು ಸ್ವತಂತ್ರವಾಗಿ ಆಡುತ್ತಿರುವುದರಿಂದ ಮತ್ತು ಉತ್ತಮ ಕೆಲಸ ಮಾಡುತ್ತಿರುವುದರಿಂದ ಅವರ ಗೆಲುವಿಗೆ ಅಪಾರ ಅವಕಾಶವಿದೆ ಎಂದು ಇತ್ತೀಚೆಗೆ ಎಲಿಮಿನೇಟ್ ಆಗಿರುವ ನಟಿ ಮತ್ತು ನಿರ್ಮಾಪಕಿ ಚಿತ್ರಾ ಹಳ್ಳಿಕೇರಿ ಭಾವಿಸುತ್ತಾರೆ. 

ಮನೆಯಲ್ಲಿ ಯಾರಿಗೆ ಉತ್ತಮ ತಂತ್ರವಿದೆ ಎಂದು ಕೇಳಿದಾಗ, ಚಿತ್ರಾ ಹೇಳಿದ್ದಿಷ್ಟು: “ನಾವು ತಂತ್ರದ ಬಗ್ಗೆ ಮಾತನಾಡುವಾಗ, ರಾಕೇಶ್ ಅವರು ಇಡೀ ಶೋದಲ್ಲಿ ಸ್ಥಿರವಾಗಿ ಉಳಿದಿದ್ದಾರೆ ಮತ್ತು ನನ್ನ ಪ್ರಕಾರ ಅದೇ ಅವರ ದೊಡ್ಡ ಶಕ್ತಿಯಾಗಿದೆ.”

ತಮ್ಮ ಪ್ರಯಾಣವನ್ನು ನೆನಪಿಸಿಕೊಂಡ ಚೈತ್ರ , “ಬಿಗ್ ಬಾಸ್ OTT ಕನ್ನಡ ಸೀಸನ್ 1 ಜೀವನದ ಪ್ರತಿಯೊಂದು ಹಂತದ ಜನರ ಜೊತೆಗೆ ಬೆರೆಯಲು ಅವಕಾಶ ನೀಡಿದ್ದು, ಅದ್ಭುತ ಅನುಭವವಾಗಿದೆ” ಎಂದರು.

ಬಿಗ್ ಬಾಸ್ ಮನೆಯಿಂದ ಹೊರಬಿದ್ದವರಲ್ಲಿ ಮೊದಲಿಗರಾದ ರೂಪದರ್ಶಿ ಮತ್ತು ನಟಿ ಕಿರಣ್ ಯೋಗೇಶ್ವರ್ ಹೇಳಿದರು, “ರಾಕೇಶ್ ಪ್ರಬಲ ಸ್ಪರ್ಧಿಗಳಲ್ಲಿ ಒಬ್ಬರು. ಏಕೆಂದರೆ, ಅವರು ತುಂಬಾ ಸ್ಮಾರ್ಟ್ ಮತ್ತು ತಮ್ಮ ಆಟದಲ್ಲಿ ಚೆನ್ನಾಗಿದ್ದಾರೆ. ಸ್ಪರ್ಧೆಯ ವಿಷಯದಲ್ಲಿ, ತಂತ್ರ ಮತ್ತು ಪ್ರೇಕ್ಷಕರ ಮೇಲೆ ಸಾನಿಯಾ ಉತ್ತಮ ನಾಡಿಮಿಡಿತವನ್ನು ಹೊಂದಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಅಕ್ಷತಾ ಕುಕಿ ಪ್ರತಿಕ್ರಿಯಿಸಿದ್ದು ಹೀಗೆ: “ರಾಕೇಶ್ ಅವರು ತುಂಬಾ ಅರ್ಹರು ಮತ್ತು ಆಟಕ್ಕೆ 100% ಕ್ಕಿಂತ ಹೆಚ್ಚು ನೀಡಿರುವುದರಿಂದ ಅವರು ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ, ಅವರು ಮನೆಯಲ್ಲಿ ಅತ್ಯಂತ ಅರ್ಹ ಅಭ್ಯರ್ಥಿ.”

BBK OTT ಕನ್ನಡ ಮನೆಯ ನಗುಮುಖದ ಹುಡುಗಿ, ಸ್ಪೂರ್ತಿ ಗೌಡ, “ರೂಪೇಶ್ ಗೆಲ್ಲಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ, ಅವರು ಪ್ರಬಲ ಸ್ಪರ್ಧಿಯಾಗಿದ್ದು, ಒಳ್ಳೆಯ ಮನುಷ್ಯನೂ ಆಗಿದ್ದಾರೆ. ರಾಕೇಶ್ ಅವರು ಟಿ ತಂತ್ರದೊಂದಿಗೆ ತಮ್ಮ ಆಟವನ್ನು ಬಹಳ ಚುರುಕಾಗಿ ಆಡುತ್ತಿರುವುದರಿಂದ ವಿಜೇತರಾಗಬೇಕೆಂದು ನಾನು ಹಾರೈಸುತ್ತೇನೆ” ಎಂದು ಹೇಳಿದರು.

ವಿಜೇತರ ಕುರಿತು ಸ್ಪರ್ಧಿಗಳು ತಮ್ಮ ಭವಿಷ್ಯ ನುಡಿದಿದ್ದಾರೆ. ಬಿಗ್ ಬಾಸ್ OTT ಕನ್ನಡದ ಮೊದಲ ಸೀಸನ್‌ನ ಯಾರು ಗೆಲ್ಲುತ್ತಾರೆಂದು ನೀವು ಭಾವಿಸುತ್ತೀರಿ? ತಿಳಿದುಕೊಳ್ಳಲು @voot ಗೆ ಟ್ಯೂನ್ ಮಾಡಿ!

ಇತ್ತೀಚಿನ ಸುದ್ದಿ

ಜಾಹೀರಾತು