12:38 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬ್ರಿಟನ್ ರಾಣಿ ಎಲಿಜಬೆತ್ ಅಂತ್ಯಕ್ರಿಯೆ: ಭಾರತ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

14/09/2022, 20:41

ಹೊಸದಿಲ್ಲಿ(reporterkarnataka.com): ಸುದೀರ್ಘ ಅವಧಿಗೆ ಬ್ರಿಟನ್‌ ರಾಣಿಯಾಗಿದ್ದ ಎಲಿಜಬೆತ್‌ II ಅವರ ಅಂತ್ಯಕ್ರಿಯೆಗೆ ಸೆಪ್ಟೆಂಬರ್‌ 19ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿ ಜಗತ್ತಿನ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅದೇ ರೀತಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕ್ವೀನ್‌ ಎಲಿಜಬೆತ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ ಸರ್ಕಾರದ ಪರವಾಗಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್‌ 18ರಿಂದ 19ರವರೆಗೆ ದ್ರೌಪದಿ ಮುರ್ಮು ಅವರು ಲಂಡನ್‌ನಲ್ಲಿ ನಡೆಯುವ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಸುಮಾರು 70 ವರ್ಷಗಳ ಕಾಲ ಬ್ರಿಟನ್‌ ರಾಣಿಯಾಗಿದ್ದ ಕ್ವೀನ್‌ ಎಲಿಜಬೆತ್‌ II ಅವರು ಸೆಪ್ಟೆಂಬರ್‌ 8ರಂದು ನಿಧನರಾಗಿದ್ದಾರೆ. ಈಗ ಅವರ ಉತ್ತರಾಧಿಕಾರಿಯನ್ನಾಗಿ ಚಾರ್ಲ್ಸ್‌ III ಅವರನ್ನು ನೇಮಿಸಲಾಗಿದೆ. ಬ್ರಿಟನ್‌ ರಾಣಿಯ ನಿಧನಕ್ಕೆ ಜಗತ್ತೇ ಕಂಬನಿ ಮಿಡಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು