1:14 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬ್ರಿಟನ್ ರಾಣಿ ಎಲಿಜಬೆತ್ ಅಂತ್ಯಕ್ರಿಯೆ: ಭಾರತ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

14/09/2022, 20:41

ಹೊಸದಿಲ್ಲಿ(reporterkarnataka.com): ಸುದೀರ್ಘ ಅವಧಿಗೆ ಬ್ರಿಟನ್‌ ರಾಣಿಯಾಗಿದ್ದ ಎಲಿಜಬೆತ್‌ II ಅವರ ಅಂತ್ಯಕ್ರಿಯೆಗೆ ಸೆಪ್ಟೆಂಬರ್‌ 19ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿ ಜಗತ್ತಿನ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅದೇ ರೀತಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕ್ವೀನ್‌ ಎಲಿಜಬೆತ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ ಸರ್ಕಾರದ ಪರವಾಗಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್‌ 18ರಿಂದ 19ರವರೆಗೆ ದ್ರೌಪದಿ ಮುರ್ಮು ಅವರು ಲಂಡನ್‌ನಲ್ಲಿ ನಡೆಯುವ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಸುಮಾರು 70 ವರ್ಷಗಳ ಕಾಲ ಬ್ರಿಟನ್‌ ರಾಣಿಯಾಗಿದ್ದ ಕ್ವೀನ್‌ ಎಲಿಜಬೆತ್‌ II ಅವರು ಸೆಪ್ಟೆಂಬರ್‌ 8ರಂದು ನಿಧನರಾಗಿದ್ದಾರೆ. ಈಗ ಅವರ ಉತ್ತರಾಧಿಕಾರಿಯನ್ನಾಗಿ ಚಾರ್ಲ್ಸ್‌ III ಅವರನ್ನು ನೇಮಿಸಲಾಗಿದೆ. ಬ್ರಿಟನ್‌ ರಾಣಿಯ ನಿಧನಕ್ಕೆ ಜಗತ್ತೇ ಕಂಬನಿ ಮಿಡಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು