11:13 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಮಂಗಳೂರು: ಖಾಕಿ ಮಹಿಳೆಯರಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಆರಂಭ

14/09/2022, 21:25

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ವೃತ್ತಿ ನಿಭಾಯಿಸುವುದರ ಜತೆಗೆ ಕೌಟುಂಬಿಕ ನಿರ್ವಹಣೆ ಬಗ್ಗೆ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ 3 ದಿನಗಳ ಒತ್ತಡ ನಿರ್ವಹಣೆ ತರಬೇತಿ ಕಾರ್ಯಾಗಾರ ಆರಂಭಿಸಲಾಗಿದೆ. 


ಬುಧವಾರ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ‘ಕೆಲವು ವರ್ಷಗಳ ಈಚೆಗೆ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಸಂಖ್ಯೆ ಹೆಚ್ಚಿದೆ. ವೃತ್ತಿ ಬದುಕಿನಲ್ಲಿ ಸಾಕಷ್ಟು ಒತ್ತಡ ಎದುರಿಸುವ ಪೊಲೀಸರು, ಅದರಲ್ಲೂ ವಿಶೇಷವಾಗಿ ಮಹಿಳಾ ಸಿಬ್ಬಂದಿಯ ಕರ್ತವ್ಯದಲ್ಲಿ ಇನ್ನಷ್ಟು ಹೆಚ್ಚು ದಕ್ಷತೆ, ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ತರಬೇತಿ ಆಯೋಜಿಸಲಾಗಿದೆ ಎಂದರು.


ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮಹತ್ವದ್ದಾಗಿದೆ. ಪರಿಸ್ಥಿತಿ ನಿಭಾಯಿಸುವ ಕಲೆ ಅರಿತರೆ, ಕೆಲಸ ಸುಲಭವಾಗುತ್ತದೆ ಎಂದು ಪೊಲೀಸ್ ಕಮಿಷನರ್ ನುಡಿದರು.

ಆರ್ಟ್ ಆಫ್ ಲಿವಿಂಗ್‍ನ ತರಬೇತುರ್ತಿ ರಶ್ಮಿ ಅನಿಲ್ ಕುಮಾರ್, ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್, ಟ್ರಾಫಿಕ್ ಎಸಿಪಿ ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.

ಇನ್‌ಸ್ಪೆಕ್ಟರ್‌ ಭಾರತಿ ಸ್ವಾಗತಿಸಿದರು. ಎಸಿಪಿ ಪಿ.ಎ. ಹೆಗಡೆ ವಂದಿಸಿದರು.

ಯಾವಾಗಲೂ ಖಾಕಿ ತೊಟ್ಟು ಡ್ಯೂಟಿಯಲ್ಲಿರುವ ಮಹಿಳಾ ಪೊಲೀಸರು, ಶ್ವೇತ ವಸ್ತ್ರ ಧರಿಸಿ ತರಬೇತಿಯಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು