11:56 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ : 2 ಪದಕ ಗೆದ್ದ ಭಾರತದ ಮೊದಲ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್

15/09/2022, 09:38

ಬೆಲ್‌ಗ್ರೇಡ್(reporterkarnataka.com): ವಿನೇಶ್ ಫೋಗಟ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ 2 ಪದಕಗಳನ್ನು ಜಯಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಸ್ವೀಡನ್‌ನ ಎಮ್ಮಾ ಜೋನ್ನಾ ಮಾಲ್ಮ್‌ಗ್ರೆನ್‌ರನ್ನು ಮಣಿಸಿದ್ದಾರೆ.

ಬುಧವಾರ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಕಂಚಿಗಾಗಿ ನಡೆದ ಸ್ಪರ್ಧೆಯಲ್ಲಿ 28ರ ಹರೆಯದ ವಿನೇಶ್ 8-0 ಅಂತರದಿಂದ ಜಯ ಸಾಧಿಸಿದರು. ವಿನೇಶ್ 2019ರಲ್ಲಿ ಕಝಕ್‌ಸ್ತಾನದಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕೂಡ ಕಂಚು ಜಯಿಸಿದ್ದರು. ಈ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಸೋತಿದ್ದ ವಿನೇಶ್ ಈ ಗೆಲುವು ಮಹತ್ವ ಪಡೆದಿದೆ.

ಮಂಗಳವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ವಿನೇಶ್ ಮಂಗೋಲಿಯದ ಖುಲನ್ ಬತ್ಖುಯೋಗ್ ವಿರುದ್ಧ ಸೋತಿದ್ದರು. ಖುಲನ್ ಫೈನಲ್‌ಗೆ ತಲುಪಿದ ಕಾರಣ ರಿಪಿಚೇಜ್ ಸುತ್ತಿನ ಮೂಲಕ ಕಂಚಿನ ಪದಕಕ್ಕಾಗಿ ನಡೆದ ಪ್ಲೇ ಆಫ್‌ನಲ್ಲಿ ಆಡುವ ಅವಕಾಶವನ್ನು ವಿನೇಶ್ ಪಡೆದರು. ರಿಪಿಚೇಜ್ ಸುತ್ತಿನಲ್ಲಿ ಕಝಕಿಸ್ತಾನದ ಎಶಿಮೋವಾರನ್ನು 4-0 ಅಂತರದಿಂದ ಸೋಲಿಸಿದ್ದರು.ಅಝರ್‌ಬೈಜಾನ್‌ನ ಎದುರಾಳಿ ಗುರ್ಬನೊವಾ ಗಾಯಗೊಂಡಿದ್ದ ಕಾರಣ ವಿನೇಶ್ ಕಂಚಿನ ಪದಕದ ಸುತ್ತಿಗೆ ತೇರ್ಗಡೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು