9:34 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ

15/09/2022, 21:45

ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ, ತಲಪಾಡಿಯಿಂದ ಸುರತ್ಕಲ್ ಗೆ 30 ಕಿಲೋ ಮೀಟರ್ ಇದ್ದು, ಈ ಪ್ರದೇಶದಲ್ಲಿ ಒಟ್ಟು 3 ಟೋಲ್ ಗೇಟ್ ಬರುತ್ತೆ. 60 ಕಿಲೋ ಮೀಟರ್ ಗಳ ಒಳಗೆ ಟೋಲ್‍ಗೇಟ್‍ಗಳು ಅತ್ಯಂತ ಸಮೀಪದಲ್ಲೇ ಹಾಕಲಾಗಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇದರ ತೆರವಿಗೆ ಸಚಿವರು ಸಂಪೂರ್ಣ ಮೇಲುಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರನ್ನು ಒತ್ತಾಯಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ‘ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲು ಅವಕಾಶವಿದೆ. ಸುರತ್ಕಲ್ ಟೋಲ್ ಗೇಟ್ ಸೇರಿದಂತೆ ರಾಜ್ಯದ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಪ್ಲಾಝಾಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಸಚಿವ ನಿತಿನ್ ಗಡ್ಕರಿ ಅವರೂ ಒಪ್ಪಿಕೊಂಡಿದ್ದಾರೆ. ಕಾನೂನು ಬಾಹಿರ  ಟೋಲ್ ಗೇಟ್ ತೆರವುಗೊಳಿಸಲು ಸರಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು