10:15 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ

15/09/2022, 21:45

ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ, ತಲಪಾಡಿಯಿಂದ ಸುರತ್ಕಲ್ ಗೆ 30 ಕಿಲೋ ಮೀಟರ್ ಇದ್ದು, ಈ ಪ್ರದೇಶದಲ್ಲಿ ಒಟ್ಟು 3 ಟೋಲ್ ಗೇಟ್ ಬರುತ್ತೆ. 60 ಕಿಲೋ ಮೀಟರ್ ಗಳ ಒಳಗೆ ಟೋಲ್‍ಗೇಟ್‍ಗಳು ಅತ್ಯಂತ ಸಮೀಪದಲ್ಲೇ ಹಾಕಲಾಗಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇದರ ತೆರವಿಗೆ ಸಚಿವರು ಸಂಪೂರ್ಣ ಮೇಲುಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರನ್ನು ಒತ್ತಾಯಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ‘ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲು ಅವಕಾಶವಿದೆ. ಸುರತ್ಕಲ್ ಟೋಲ್ ಗೇಟ್ ಸೇರಿದಂತೆ ರಾಜ್ಯದ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಪ್ಲಾಝಾಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಸಚಿವ ನಿತಿನ್ ಗಡ್ಕರಿ ಅವರೂ ಒಪ್ಪಿಕೊಂಡಿದ್ದಾರೆ. ಕಾನೂನು ಬಾಹಿರ  ಟೋಲ್ ಗೇಟ್ ತೆರವುಗೊಳಿಸಲು ಸರಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು