9:22 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ

15/09/2022, 21:45

ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ, ತಲಪಾಡಿಯಿಂದ ಸುರತ್ಕಲ್ ಗೆ 30 ಕಿಲೋ ಮೀಟರ್ ಇದ್ದು, ಈ ಪ್ರದೇಶದಲ್ಲಿ ಒಟ್ಟು 3 ಟೋಲ್ ಗೇಟ್ ಬರುತ್ತೆ. 60 ಕಿಲೋ ಮೀಟರ್ ಗಳ ಒಳಗೆ ಟೋಲ್‍ಗೇಟ್‍ಗಳು ಅತ್ಯಂತ ಸಮೀಪದಲ್ಲೇ ಹಾಕಲಾಗಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇದರ ತೆರವಿಗೆ ಸಚಿವರು ಸಂಪೂರ್ಣ ಮೇಲುಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರನ್ನು ಒತ್ತಾಯಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ‘ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲು ಅವಕಾಶವಿದೆ. ಸುರತ್ಕಲ್ ಟೋಲ್ ಗೇಟ್ ಸೇರಿದಂತೆ ರಾಜ್ಯದ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಪ್ಲಾಝಾಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಸಚಿವ ನಿತಿನ್ ಗಡ್ಕರಿ ಅವರೂ ಒಪ್ಪಿಕೊಂಡಿದ್ದಾರೆ. ಕಾನೂನು ಬಾಹಿರ  ಟೋಲ್ ಗೇಟ್ ತೆರವುಗೊಳಿಸಲು ಸರಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು