8:34 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಮೇಲ್ಛಾವಣಿ ಕಾಮಗಾರಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

15/09/2022, 22:05

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಪರಿಸರದಲ್ಲಿ ಮೇಲ್ಛಾವಣಿಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನಮ್ಮ ಆಡಳಿತ ವ್ಯವಸ್ಥೆಯು ಹೆಚ್ಚಿನ ಮುತುವರ್ಜಿ ವಹಿಸಿದೆ. ಕಳೆದ ಸರಕಾರದ ಆಡಳಿತಕ್ಕೆ ಹೋಲಿಸಿದರೆ ನಮ್ಮ ಸರಕಾರವು ಹಿಂದೆಂದಿಗಿಂತಲೂ ಅಧಿಕ ಅನುದಾನಗಳನ್ನು ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನೀಡಿದೆ ಎಂದು ಹೇಳಿದರು. 

ಕುದ್ರೋಳಿ ‌ಶ್ರೀ ಭಗವತಿ ಕ್ಷೇತ್ರದ ಪರಿಸರದಲ್ಲಿ ಮೇಲ್ಛಾವಣಿ ಅಳವಡಿಕೆ ಕಾಮಗಾರಿ ಮಾಡಿಕೊಡುವಂತೆ ಸ್ಥಳೀಯ ಕಾರ್ಪೋರೇಟರ್ ಹಾಗೂ ಕ್ಷೇತ್ರದ ಆಡಳಿತ ಮಂಡಳಿಯ ಪ್ರಮುಖರು ಮನವಿ ನೀಡಿದ್ದರು. ಕ್ಷೇತ್ರದ ಅಭಿವೃದ್ಧಿಯ ನೆಲೆಯಲ್ಲಿ ಕಾಮಗಾರಿಗೆ ಅನುಮೋದನೆ ನೀಡಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ  ಕಾರ್ಪೋರೇಟರ್ ಜಯಶ್ರೀ ಕುಡ್ವ, ಲೀಲಾವತಿ ಪ್ರಕಾಶ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಆಚಾರಪಟ್ಟವರು, ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಮೊಕ್ತೇಸರರಾದ ನಾರಾಯಣ ಕೆ, ಸುಜನ್ ದಾಸ್ ಕುಡುಪು, ಉಪಾಧ್ಯಕ್ಷರಾದ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಸುಧೀರ್ ಬಿ, ಉಷಾ ಪ್ರಭಾಕರ್ ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು