11:36 PM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ 

15/09/2022, 22:29

ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉಜ್ಜೋಡಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ಸೇವಾ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಪದಗ್ರಹಣ ಉದ್ಘಾಟಿಸಿ ಮಾತನಾಡಿ, ಯುವವಾಹಿನಿ ಕೇಂದ್ರ ಸಮಿತಿಗೆ ಸರ್ಕಾರದಿಂದ ಸ್ವಂತ ನಿವೇಶನ ದೊರೆತಿರುವುದಕ್ಕೆ ಅಭಿನಂದಿಸಿದರು.

ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಸಂತೋಷ್ ಕಾಮತ್ ಮಾತನಾಡಿ, ಯುವಕರು ವಿದ್ಯಾವಂತರಾಗಿ, ಪ್ರತಿಭಾವಂತರಾಗಿ, ಸ್ವಾವಲಂಬಿಗಳಾಗಿ ಧನಾತ್ಮಕವಾಗಿ ಚಿಂತನೆಗಳನ್ನು ಮಾಡುತ್ತಾ ಸಮಾಜದ ಬೇರೆ ಬೇರೆ ಕ್ಷೇತ್ರಗಳಲ್ಲಿ ಮುಂದೆ ಬಂದು ಸಾಧನೆ ಮಾಡುವಂತಾಗಬೇಕೆಂದು ಯುವಕರಿಗೆ ಕರೆ ನೀಡಿದರು.

ಘಟಕದ ಅಧ್ಯಕ್ಷೆ ನಯನ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಘಟಕದ ಮಾಜಿ ಅಧ್ಯಕ್ಷ ಗೋಪಾಲ್.ಎಂ.ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಘಟಕದ ಹಿರಿಯ ಸದಸ್ಯೆ ಪ್ರೇಮಾ ಪ್ರಾರ್ಥಿಸಿದರು. ಅಧ್ಯಕ್ಷೆ ನಯನಾ ಸುರೇಶ್ ಸ್ವಾಗತಿಸಿ, ಕಾರ್ಯದರ್ಶಿ ಲೋಕೇಶ್ ಅಮೀನ್ ಗತವರ್ಷದ ವರದಿ ನೀಡಿದರು. 

ಪ್ರಸ್ತುತ ಸಾಲಿನ ಚುನಾವಣಾ ಅಧಿಕಾರಿ, ಘಟಕದ ನಿಕಟ ಪೂರ್ವ ಅಧ್ಯಕ್ಷೆ ಸುಮಾ ವಸಂತ್  2022 – 23ನೇ ಸಾಲಿನ ನೂತನ ಪದಾಧಿಕಾರಿಗಳ ತಂಡವನ್ನು ವೇದಿಕೆಗೆ ಆಹ್ವಾನಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ನೂತನ ಸಾಲಿನ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿ ಅಭಿನಂದಿಸಿದರು.

ನೂತನ ಅಧ್ಯಕ್ಷ  ಪೃಥ್ವಿರಾಜ್ ಅವರು ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರಲು ಎಲ್ಲರ ಸಹಕಾರ ಕೋರಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ  ರವಿ ಕೊಂಡಾಣ, ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು,ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನೂತನ ಕಾರ್ಯದರ್ಶಿ  ಸುರೇಖಾ ಮೋಹನ್ ವಂದಿಸಿ,ಘಟಕ ಸದಸ್ಯ ದೀಕ್ಷಿತ್ ಹಾಗೂ ತೃಪ್ತಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು