7:03 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಸ್ನೇಹಿತನ ಬೈಕ್‌ನಲ್ಲಿ ಪಿಕ್‌ನಿಕ್‌ಗೆ ಹೋಗಿದ್ದ ಯುವತಿ ರಸ್ತೆ ಅಪಘಾತಕ್ಕೆ ಬಲಿ

17/09/2022, 19:39

ಬೆಂಗಳೂರು (reporterkarnataka.com): ಸ್ನೇಹಿತನ ಜತೆ ಬೈಕ್‌ನಲ್ಲಿ ಪಿಕ್‌ನಿಕ್‌ಗೆ ತೆರಳುತ್ತಿದ್ದ ಬೆಂಗಳೂರಿನ ಯುವತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್​ ಬಳಿ ನಡೆದಿದೆ. 

ಬೆಂಗಳೂರು ಮೂಲದ ಯುವತಿ ಚೈತ್ರಾ (19) ಮೃತಪಟ್ಟ ವಿದ್ಯಾರ್ಥಿನಿ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಚೈತ್ರಾ ತನ್ನ ಸ್ನೇಹಿತ ಲಿಖಿತ್ ಗೌಡನೊಂದಿಗೆ ಶ್ರೀನಿವಾಸ ಸಾಗರ ಜಲಾಶಯ ನೋಡಲು ತೆರಳಿದ್ದಾಳೆ. ಆದ್ರೆ, ಜಲಾಶಯ ನೋಡಿ ಬೆಂಗಳೂರಿನತ್ತ ವಾಪಾಸ್ಸಾಗುವಾಗ ಚೈತ್ರಾ ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಗುದ್ದಿದೆ.

ಸ್ಕೂಟಿಯಲ್ಲಿ ತೆರಳುತ್ತಿದ್ದ ಚೈತ್ರಾ ಹಾಗೂ ಲಿಖಿತ್ ಗೌಡ ಹೈವೇಗೆ ಎಂಟ್ರೀ ಕೊಡುತ್ತಿದ್ದಂತೆಯೇ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾತಮ ಚೈತ್ರಾ ಸಾವನ್ನಪ್ಪಿದ್ದು, ಗೆಳೆಯ  ಲಿಖಿತ್ ಗೌಡ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು