1:12 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು