2:05 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು